Slide
Slide
Slide
previous arrow
next arrow

ಬಿಸಲಕೊಪ್ಪ ಪ್ರೌಢಶಾಲೆಯಲ್ಲಿ ಅರ್ಥಪೂರ್ಣ ಯೋಗ ದಿನಾಚರಣೆ

300x250 AD

ಶಿರಸಿ; ತಾಲೂಕಿನ ಸೂರ್ಯನಾರಾಯಣ ಪ್ರೌಢಶಾಲೆ ಬಿಸಲಕೊಪ್ಪದಲ್ಲಿ ವಿಶ್ವ ಯೋಗ ದಿನದ ಅರ್ಥಪೂರ್ಣ ಆಚರಣೆ ನಡೆಯಿತು.

ಆರಂಭದಲ್ಲಿ ಮುಖ್ಯೋಪಾಧ್ಯಾಯರಾದ ಗಣೇಶ್ ಭಟ್ ವಾನಳ್ಳಿ ಎಲ್ಲರನ್ನು ಸ್ವಾಗತಿಸಿ ಯೋಗದ ಮಹತ್ವ ಸಾರಿದರು. ತದನಂತರ ದೈಹಿಕ ಶಿಕ್ಷಣ ಶಿಕ್ಷಕ ಸತೀಶ ಹೆಗಡೆ ಪ್ರತಿ ಆಸನಗಳ ಮಹತ್ವವನ್ನು ವಿವರಿಸಿ ಪ್ರಾತ್ಯಕ್ಷಿಕೆ ನೀಡಿದರು. ಇದೇ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿನಿ ವೈಷ್ಣವಿ ಹೆಗಡೆ ಯೋಗ ಪ್ರಾತ್ಯಕ್ಷಿಕೆ ನೀಡಿದ್ದು, ಆಕೆಗೆ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಎಲ್ಲ ವಿದ್ಯಾರ್ಥಿಗಳು ಯೋಗವನ್ನು ಮಾಡಿ ಅರ್ಥಪೂರ್ಣ ಆಚರಣೆ ಮಾಡಿದರು. ಕೊನೆಯಲ್ಲಿ ಶಿಕ್ಷಕ ಲೋಕನಾಥ ಹರಿಕoತ್ರ ವಂದಿಸಿದ್ದು, ಶಾಲೆಯ ಶಿಕ್ಷಕರೆಲ್ಲರೂ ಹಾಜರಿದ್ದರು.

300x250 AD
Share This
300x250 AD
300x250 AD
300x250 AD
Back to top