• Slide
    Slide
    Slide
    previous arrow
    next arrow
  • ಕಾರವಾದಲ್ಲಿ ಖಾಸಗಿ ಉದ್ಯಮಿ ಕುಟುಂಬ ಆತ್ಮಹತ್ಯೆಗೆ ಶರಣು

    300x250 AD

    ಕಾರವಾರ: ಗೋವಾದ ವರ್ಣಾ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪೂರೈಕೆ ಉದ್ಯಮ ನಿರ್ವಹಿಸುತ್ತಿದ್ದ ತಾಲ್ಲೂಕಿನ ಗೋಪಶಿಟ್ಟಾ ಮೂಲದ ಉದ್ಯಮಿ ಶ್ಯಾಮ್ ಪಾಟೀಲ್ ಕುಟುಂಬ ಬುಧವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾಗಿದೆ.

    ಶ್ಯಾಮ್ ಪಾಟೀಲ್ (40), ಪತ್ನಿ ಜ್ಯೋತಿ ಪಾಟೀಲ್ (37), ಮಗ ದಕ್ಷ ಪಾಟೀಲ್‌ (12) ಆತ್ಮಹತ್ಯೆಗೆ ಶರಣಾದವರು.

    ಪತ್ನಿ, ಪುತ್ರ ನಗರದ ಕೋಡಿಬಾಗದಲ್ಲಿರುವ ಕಾಳಿ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಶ್ಯಾಮ್ ನಗರದಿಂದ 60 ಕಿ.ಮೀ. ದೂರದಲ್ಲಿರುವ ಗೋವಾ ರಾಜ್ಯದ ಪಾಡಿ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

    ಮೃತ ಬಾಲಕ, ಪತ್ನಿಯ ಮೃತದೇಹ ದೇವಬಾಗ ಕಡಲತೀರದಲ್ಲಿ ದೊರೆತಿದ್ದು, ಶ್ಯಾಮ್ ಮೃತದೇಹ ಸಾಸಿ ಅರಣ್ಯ ಪ್ರದೇಶದಲ್ಲಿ ಸಿಕ್ಕಿದೆ.

    300x250 AD

    ಗುರುವಾರ ನಸುಕಿನ ಜಾವ ದೇವಬಾಗ ಕಡಲತೀರದಲ್ಲಿ ಬಾಲಕನ ಮೃತದೇಹ ಪತ್ತೆಯಾಗಿತ್ತು. ಚಿತ್ತಾಕುಲ ಠಾಣೆ ಪೊಲೀಸರು ತನಿಖೆ ಆರಂಭಿಸುತ್ತಿದ್ದಂತೆ ಕುಟುಂಬ ಸಾಮೂಹಿಕ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

    ‘ಉದ್ಯಮಿ ಶ್ಯಾಮ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಗಿ ಗೋವಾದ ಕುಕಳ್ಳಿ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ಪತ್ನಿ, ಪುತ್ರ ಆತ್ಮಹತ್ಯೆ ಮಾಡಿಕೊಂಡ ಬಳಿಕ ಶ್ಯಾಮ್ ಇಲ್ಲಿಂದ ದೂರಕ್ಕೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ.ಆತ್ಮಹತ್ಯೆಗೆ ಖಚಿತ ಕಾರಣ ತಿಳಿದುಬಂದಿಲ್ಲ’ ಎಂದು ಚಿತ್ತಾಕುಲ ಠಾಣೆ ಪೊಲೀಸರು ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top