Slide
Slide
Slide
previous arrow
next arrow

ಮನೆ ಬಾಗಿಲಿಗೆ ಬಂದ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

300x250 AD

ಶಿರಸಿ : ಇತ್ತೀಚೆಗೆ ತಾಲೂಕಿನ ಹುಲೇಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ತಲ್ಲಿನಮನೆಯ ರಾಮಕೃಷ್ಣ ‌ಹೆಗಡೆ ಎಂಬವರ ಮನೆಯಲ್ಲಿ ಚಿರತೆಯೊಂದು ನಾಯಿಯನ್ನು ಕಚ್ಚಿಕೊಂಡು ಹೋಗಿತ್ತು. ಇದಾದ ನಂತರವೂ ಅದೇ ಜಾಗಕ್ಕೆ ಪುನಃ ಬಂದ ಚಿರತೆ ಏನೂ ಸಿಗದೇ ಮರಳಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. .  

ಮನೆ ಬಾಗಿಲಿನಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಬಂದು ಎತ್ತಿಕೊಂಡು ಹೋಗಿತ್ತು. ಇದಾದ ಕೆಲವೇ ದಿನಗಳ ಬಳಿಕ ಮತ್ತೆ ಆಹಾರ ಅರಸಿ ಬಂದಿತ್ತು. ‌ಆದರೆ ನಾಯಿ ಸಿಗದ ಕಾರಣ ಮನೆ ಬಾಗಿಲಿನಲ್ಲಿ ಅತ್ತಿತ್ತ ಹುಡುಕಾಟ ನಡೆಸಿ, ವಾಪಾಸ್ ಹೋದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. 

300x250 AD

ಈ ಘಟನೆ ಮನೆಯವರೂ ಸೇರಿದಂತೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ. ಅದೇ ದಾರಿಯಲ್ಲಿ ಶಾಲಾ ಮಕ್ಕಳು ಓಡಾಡುತ್ತಿದ್ದಾರೆ. ಅರಣ್ಯ ಇಲಾಖೆ ಚಿರತೆಯನ್ನು ಸೆರೆ ಹಿಡಿದು ಬೇರೆಡೆಗೆ ಸಾಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.‌      

Share This
300x250 AD
300x250 AD
300x250 AD
Back to top