Slide
Slide
Slide
previous arrow
next arrow

ದಿನಕ್ಕೊಂದು ಕಗ್ಗ

300x250 AD

ಏನು ಪ್ರಪಂಚವಿದು! ಏನು ಧಾಳಾಧಾಳಿ!।
ಏನದ್ಭುತಾಪಾರಶಕ್ತಿನಿರ್ಘಾತ! ॥
ಮಾನವನ ಗುರಿಯೇನು? ಬೆಲೆಯೇನು? ಮುಗಿವೇನು?।
ಏನರ್ಥವಿದಕೆಲ್ಲ?- ಮಂಕುತಿಮ್ಮ ॥ ೧೦ ॥

ಇಲ್ಲಿಯವರೆಗೆ ಬಂದ ೯ ಕಗ್ಗಗಳಲ್ಲಿ, ಮೊದಲ ಮೂರು ಕಗ್ಗಗಳಲಿ, ಶ್ರೀ ಗುಂಡಪ್ಪನವರು, ಆ ಪರಮಾತ್ಮನೆಂದೆನಿಸಿಕೊಂಡ, ಪರಮಶಕ್ತಿಗೆ ನಮಿಸುತ್ತಾ, ಮುಂದಿನ ಕಗ್ಗಗಳಲ್ಲಿಮನುಷ್ಯನ ಜೀವನದ ಮತ್ತು ಸೃಷ್ಟಿಯ ವಿಚಿತ್ರಗಳನ್ನು ಬರೆದಿದ್ದಾರೆ. ಈ ಸಮಯಕ್ಕೆ ನಾ ಹಿಂದೆ ಹೇಳಿದಂತೆ ಎರಡನೇ ಮಹಾ ಯುದ್ಧ ಆರಂಭವಾಗಿ ಎಲ್ಲೆಲ್ಲೂ ಹಾಹಾಕಾರ ದಾಳಿಗಳು. ಇವಗಳನ್ನು ಕಂಡು ಅಂದಿನ ಸಮಯಕ್ಕೆ ಅವರ ಅನುಭೂತಿ ಏನಿತ್ತು ಎಂಬುದು ಇಂದಿನ ಮತ್ತು ಮುಂದಿನ ಕೆಲವು ಕಗ್ಗಗಳಲ್ಲಿ ಕಾಣಬಹುದು. 

300x250 AD
Share This
300x250 AD
300x250 AD
300x250 AD
Back to top