Slide
Slide
Slide
previous arrow
next arrow

ಸ್ವರ್ಣವಲ್ಲಿಯಲ್ಲಿ ವೈದಿಕ ಸಮಾವೇಶ ಸಂಪನ್ನ

300x250 AD

ಶಿರಸಿ: ತಾಲೂಕಿನ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದಲ್ಲಿ ಮಠಾಧೀಶರಾದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾ ಸ್ವಾಮೀಜಿಗಳ ಸಾನಿಧ್ಯದಲ್ಲಿ ಒಂದು ದಿನದ ವೈದಿಕ ಸಮಾವೇಶ ಜು.4 ಮಂಗಳವಾರದಂದು ನಡೆಯಿತು.

ಚಾತುರ್ಮಾಸ್ಯ ವೃತಾಚರಣೆಯ ಎರಡನೇ ದಿನವಾದ ಮಂಗಳವಾರ ನವಾಗಾರ ಪ್ರವೇಶದ ಕುರಿತು ಚಿಂತನ ಗೋಷ್ಠಿ ನಡೆಯಿತು.

ವಿದ್ವಾಂಸರಾದ ಪ್ರಸಾದ್ ಜೋಶಿ ನಿರೂಪಣೆ ಮಾಡಿದರು. ಇದಕ್ಕೂ ಮುನ್ನ ಮಠದ ಆಸ್ಥಾನ ವಿದ್ವಾಂಸರಾದ ವಿದ್ವಾನ್ ಬಾಲಚಂದ್ರ ಶಾಸ್ತ್ರಿ ಚಿಂತನ ಗೋಷ್ಠಿಗೆ ಚಾಲನೆ ನೀಡಿ ಮಾತನಾಡಿದರು. ವಿದ್ವಾನ್ ಗಣಪತಿ ಭಟ್ಟ ಕಿಬ್ಬಳ್ಳಿ, ಮತ್ತೀಹಳ್ಳಿ ವಿನಾಯಕ ಭಟ್ಟ, ವಿ. ಕುಮಾರ ಭಟ್ಟ ಕೊಳಗಿಬೀಸ್ ಹಾಗೂ ಅನೇಕ ವೈದಿಕರು ಭಾಗವಹಿಸಿದರು.

300x250 AD

ಬಳಿಕ ವೈದಿಕ ಪರಿಷತ್ತಿನ ಸರ್ವ ಸದಸ್ಯರ ವಾರ್ಷಿಕ ಸಭೆ ಶ್ರೀಗಳವರ ಸಾನಿಧ್ಯದಲ್ಲಿ ಶ್ರೀಮಠದಲ್ಲಿ ನೆರವೇರಿತು.

Share This
300x250 AD
300x250 AD
300x250 AD
Back to top