Slide
Slide
Slide
previous arrow
next arrow

ಭಟ್ಕಳದಲ್ಲಿ ಭಾರೀ ಮಳೆ: ಹೆದ್ದಾರಿಯಲ್ಲೇ ನಿಂತ ನೀರು, ವಾಹನ ಸಂಚಾರ ಅಸ್ತವ್ಯಸ್ತ

300x250 AD

ಭಟ್ಕಳ: ತಾಲೂಕಿನಲ್ಲಿ ಮುಂಗಾರು ಜೋರಾಗಿದ್ದು ಸತತವಾಗಿ ಸುರಿದ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತು ಸಂಚಾರ ವ್ಯತ್ಯಯವಾದ ಘಟನೆ ನಡೆದಿದೆ. ಜು.4, ಮಂಗಳವಾರ ಮಧ್ಯಾಹ್ನ ಆರಂಭವಾದ ಮಳೆ ಸಾಯಂಕಾಲದವರೆಗೂ ಮುಂದುವರಿದಿದ್ದು ತಗ್ಗು ಪ್ರದೇಶದ ಅನೇಕ ಮನೆಗಳಿಗೆ ನೀರು ನುಗ್ಗಿ, ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಮೂರು-ನಾಲ್ಕು ಕಡೆಗಳಲ್ಲಿ ನೀರು ನಿಂತು 2-3 ತಾಸುಗಳ ಕಾಲ ಸಂಚಾರ ವ್ಯತ್ಯಯವಾಗಿದೆ.

ಕಳೆದ ವರ್ಷವೂ‌ ಕೂಡಾ ಭಾರೀ ಮಳೆಗೆ ಹಲವಾರು ಅವಘಡಗಳು ಸಂಭವಿಸಿದ್ದು, ಮಂಗಳವಾರದ ಮಳೆಯೂ ಕೂಡಾ ಅದನ್ನೇ ನೆನಪಿಸುತ್ತಿದೆ. ಅನೇಕ ಭಾಗಗಳಲ್ಲಿ ನೀರು ನುಗ್ಗಿ ಹಾನಿಯಾಗಿದ್ದರೆ, ನಗರದ ರಂಗೀಕಟ್ಟೆ, ಶಂಶುದ್ಧೀನ ಸರ್ಕಲ್, ಮಣ್ಕುಳಿ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ನೀರು ನಿಂತು ವಾಹನ ಸವಾರರು ಪರದಾಡಬೇಕಾಯಿತು.

300x250 AD
Share This
300x250 AD
300x250 AD
300x250 AD
Back to top