Slide
Slide
Slide
previous arrow
next arrow

ಜನಸಾಮಾನ್ಯರಲ್ಲಿ ಹರ್ಷ ತಂದ ಬಜೆಟ್: ಜಗದೀಪ ತೆಂಗೇರಿ

300x250 AD

ಹೊನ್ನಾವರ: ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಾಡಿನ ಜನಸಾಮಾನ್ಯರಲ್ಲಿ ಸಂತಸ ತಂದಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ಹರ್ಷ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಪೂರ್ವ ಕಾಂಗ್ರೆಸ್ ಪಕ್ಷ ನಾಡಿನ ಏಳು ಕೋಟಿ ಜನರಿಗೆ ನೀಡಿದ ಐದು ಗ್ಯಾರಂಟಿಗಳಾದ ಶಕ್ತಿ, ಗೃಹ ಲಕ್ಷ್ಮೀ, ಗೃಹ ಜ್ಯೋತಿ,ಯುವ ನಿಧಿಗಳಿಗೆ ಬಜೆಟ್ ನಲ್ಲಿ ಅನುದಾನ ಒದಗಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ ಎಂದು ಜಗದೀಪ ತೆಂಗೇರಿ ಹೇಳಿದ್ದಾರೆ.ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ನಲುಗಿದ ಶ್ರೀಸಾಮಾನ್ಯನ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ ಎಂದಿದ್ದಾರೆ.

300x250 AD

ಅಷ್ಟೇ ಅಲ್ಲದೇ ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಬಜೆಟ್ ನಲ್ಲಿ ಅನುದಾನ ನೀಡುವ ಮೂಲಕ ಜಿಲ್ಲೆಯ ಜನರ ಪ್ರೀತಿಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ ಎಂದು ಜಗದೀಪ ಎನ್ ತೆಂಗೇರಿ ಹೇಳಿದ್ದಾರೆ.

Share This
300x250 AD
300x250 AD
300x250 AD
Back to top