Slide
Slide
Slide
previous arrow
next arrow

ಬಿಇಒ ಶಾಂತೇಶ ನಾಯಕಗೆ ಬೀಳ್ಕೊಡುಗೆ

300x250 AD

ಕಾರವಾರ: ಶಿಕ್ಷಣಾಧಿಕಾರಿ ಶಾಂತೇಶ ನಾಯಕರಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ನಡೆಯಿತು.

ಈ ವೇಳೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಚಂದ್ರಹಾಸ ರಾಯ್ಕರ, ಕ್ಷೇತ್ರ ಸಮನ್ವಯಾಧಿಕಾರಿ ರಾಜೇಂದ್ರ ನಾಯ್ಕ, ಪತ್ರಾಂಕಿತ ವ್ಯವಸ್ಥಾಪಕ ರಾಜೇಂದ್ರ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಹಾಗೂ ಬಿ.ಆರ್.ಸಿ.ಯ ಸಿಬ್ಬಂದಿಗಳು, ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಎಲ್ಲಾ ಸಂಘಗಳ ಪದಾಧಿಕಾರಿಗಳು ಹಾಜರಿದ್ದರು.

300x250 AD

ಇದೇ ಸಂದರ್ಭದಲ್ಲಿ ಸಿ.ಆರ್.ಪಿ.ಗಳಾದ ಮಮತಾ ಬಂಟ ಕೆರವಡಿ, ವಿದ್ಯಾ ನಾಯ್ಕ ಮಾಜಾಳಿ, ಬಿ.ಆರ್.ಪಿ. ಭಾರತಿ ಕಾಮತ ಅವರಿಗೆ ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತೇಶ ನಾಯಕ ಅವರಿಗೆ ಹಾಗೂ ನೂತನವಾಗಿ ಅಧಿಕಾರ ಸ್ವೀಕರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಹಾಸ ರಾಯ್ಕರ ಅವರಿಗೆ ನಗೆ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಅಖ್ತರ ಜಾಫರ ಸೈಯದ್ ಅವರು ಹೂಗುಚ್ಛ ಹಾಗೂ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು. ಸಿ.ಆರ್.ಪಿ. ಪ್ರಶಾಂತ ನಾಯ್ಕ ನಿರ್ವಹಿಸಿದರು. ಸಿ.ಆರ್.ಪಿ. ಅಶೋಕ ಬಾಡಕರ ವಂದಿಸಿದರು.

Share This
300x250 AD
300x250 AD
300x250 AD
Back to top