Slide
Slide
Slide
previous arrow
next arrow

ನಗೆಯಲ್ಲಿ ವನಮಹೋತ್ಸವ ಆಚರಿಸಿದ ಪುಟಾಣಿಗಳು

300x250 AD

ಕಾರವಾರ: ತಾಲೂಕಿನ ನಗೆ ಗ್ರಾಮದಲ್ಲಿ ಗ್ರಾಮ ಅರಣ್ಯ ಸಮಿತಿ, ಸಾಮಾಜಿಕ ಅರಣ್ಯ ವಿಭಾಗ, ಅರಣ್ಯ ಇಲಾಖೆ ಹಾಗೂ ಶಾಲಾ ಮಕ್ಕಳಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಕಿರಣ, ಅರಣ್ಯ ಇಲಾಖೆಯ ಡೆಪುಟಿ ಫಾರೆಸ್ಟ್ ಆಫಿಸರ್ ಸಚಿನ ನಾಯ್ಕ, ಲಾಲ್ ಸಾಬ್, ತೌಶಿಯಾ, ಗ್ರಾ.ಪಂ. ಅಧ್ಯಕ್ಷೆ ಸುವರ್ಣ ಗಾಂವಕರ, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ರಾಮಾ ಗುರ್ಖ್ಯಾ ಗೌಡ ಹಾಗೂ ಸದಸ್ಯರು, ಶಾಲಾ ಮುಖ್ಯಾಧ್ಯಾಪಕ ಅಖ್ತರ್ ಸೈಯದ್, ಸಹ ಶಿಕ್ಷಕಿ ರೂಪಾ ನಾಯ್ಕ, ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಶಾಲಾ ಮಕ್ಕಳು, ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನಗೆ ಗ್ರಾಮದ ಶಾಲೆಯ ಪಕ್ಕದಲ್ಲಿ, ಮುಖ್ಯರಸ್ತೆಯ ಪಕ್ಕದಲ್ಲಿ ಗಿಡಗಳನ್ನು ನೆಟ್ಟರು.

300x250 AD

ಭಾಗವಹಿಸಿದ ಮಕ್ಕಳಿಗೆ ಹಾಗೂ ಗ್ರಾಮಸ್ಥರಿಗೆ ಅರಣ್ಯ ಇಲಾಖೆಯ ಸಚಿನ ನಾಯ್ಕ ಅವರು ಅಭಿನಂದಿಸಿದರು. ಶಾಲಾ ಮುಖ್ಯಾಧ್ಯಾಪಕ ಅಖ್ತರ್ ಸೈಯದ್ ಆಗಮಿಸಿದ ಎಲ್ಲರಿಗೂ ಸ್ವಾಗತಿಸಿ ಹಾಗೂ ಸಿಹಿ ವಿತರಣೆ ಮಾಡಿದರು.

Share This
300x250 AD
300x250 AD
300x250 AD
Back to top