• Slide
    Slide
    Slide
    previous arrow
    next arrow
  • ವಕೀಲರ ಸಂಘದ ಅಧ್ಯಕ್ಷರಾಗಿ ಕುಲಕರ್ಣಿ ಆಯ್ಕೆ

    300x250 AD

    ದಾಂಡೇಲಿ: ನಗರದ ವಕೀಲರ ಸಂಘದ ಅಧ್ಯಕ್ಷರಾಗಿ ಹಿರಿಯ ವಕೀಲರಾದ ಎಚ್.ಎಸ್.ಕುಲಕರ್ಣಿಯವರು ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಐ.ಸಿ.ನಾಯ್ಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ವಕೀಲರ ಸಂಘದ ಉಪಾಧ್ಯಕ್ಷರಾಗಿ ರೇಷ್ಮಾ ಬಾವಾಜಿ ಮತ್ತು ಖಜಾಂಚಿಯಾಗಿ ಸುನೀಲ್ ದೇಸಾಯಿಯವರನ್ನು ಆಯ್ಕೆ ಮಾಡಲಾಗಿದೆ. ಸಹ ಕಾರ್ಯದರ್ಶಿಯಾಗಿ ಆರ್.ವಿ.ಗಡೆಪ್ಪನವರ, ಗ್ರಂಥಪಾಲಕರಾಗಿ ಕವಿತಾ ಗಡೆಪ್ಪನವರನ್ನು ಆಯ್ಕೆ ಮಾಡಲಾಗಿದೆ.

    300x250 AD

    ಸಂಘದ ನಿರ್ಗಮಿತ ಅಧ್ಯಕ್ಷರಾದ ವಿ.ಆರ್.ಹೆಗಡೆಯವರ ಅಧ್ಯಕ್ಷತೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಜರುಗಿತು. ಈ ಸಂದರ್ಭದಲ್ಲಿ ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು. ವಕೀಲರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ನಗರದ ಗಣ್ಯರನೇಕರು ಅಭಿನಂದಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top