Slide
Slide
Slide
previous arrow
next arrow

‘ಅನಂತಮೂರ್ತಿ ಚಾರಿಟೇಬಲ್ ಟ್ರಸ್ಟ್’ನಿಂದ ಕುಡಿಯುವ ನೀರಿನ ಘಟಕ ಸ್ಥಾಪನೆ

300x250 AD

ಶಿರಸಿ: “ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್” ಉತ್ತರ ಕನ್ನಡ ಜಿಲ್ಲೆಯಾದ್ಯಂತ ಆಯ್ದ ಶಾಲಾ ಕಾಲೇಜು , ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಕೆ ಯೋಜನೆಯನ್ನು ಕೈಗೊಂಡಿದ್ದು,ಅದರಂತೆಯೇ ಇಲ್ಲಿನ ಪಂಡಿತ್ ಸರ್ಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಾಗೂ ಸಂದರ್ಶಕರಿಗೆ ಅನುಕೂಲವಾಗಲಿ ಎಂಬ ಹಿತದೃಷ್ಟಿಯಿಂದ ಉಚಿತ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಿದ್ದು, ಜು.9, ಭಾನುವಾರ ಬೆಳಿಗ್ಗೆ 10.30 ಘಂಟೆಗೆ ನೀರಿನ ಘಟಕದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ.

ಉದ್ಘಾಟಕರಾಗಿ ಸಹಾಯಕ ಆಯುಕ್ತ ದೇವರಾಜ್ ಆರ್, ಆಗಮಿಸಲಿದ್ದು, ಅಧ್ಯಕ್ಷತೆಯನ್ನು ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಎಮ್. ಹೆಗಡೆ ವಹಿಸಲಿದ್ದಾರೆ. ಪಂಡಿತ್ ಸರ್ಕಾರಿ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ.ಗಜಾನನ ಭಟ್ ಘನ ಉಪಸ್ಥಿತಿ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಸ್ಕೊಡವೇಸ್ ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ ನಾಯ್ಕ್, ಡಿವೈಎಸ್ಪಿ ಕೆ.ಎಲ್.ಗಣೇಶ್, ಸಿಪಿಐ ರಾಮಚಂದ್ರ ನಾಯಕ್,ರೋಟರಿ ಕ್ಲಬ್ ಅಧ್ಯಕ್ಷ ಗಣೇಶ ಹೆಗಡೆ ಉಪಸ್ಥಿತರಿರಲಿದ್ದಾರೆ.

300x250 AD
Share This
300x250 AD
300x250 AD
300x250 AD
Back to top