Slide
Slide
Slide
previous arrow
next arrow

ಜೈನ ಮುನಿ ಹತ್ಯೆ: ಆರೋಪಿಗಳ ವಿರುದ್ಧದ ಕ್ರಮಕ್ಕೆ ರಾಘವೇಶ್ವರ ಶ್ರೀ ಆಗ್ರಹ

300x250 AD

ಗೋಕರ್ಣ: ಸಾಧು ಸಂತರ ಮೇಲೆ ದಾಳಿ ನಡೆಯುತ್ತಿರುವುದು ಖಂಡನೀಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ.

ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಾಗಿರುವುದು ಆಘಾತ ತಂದಿದೆ. ಯಾವುದೇ ಧರ್ಮದ ಸಾಧು- ಸಂತರನ್ನು ಗೌರವದಿಂದ ಕಾಣುವುದು ನಮ್ಮ ಸಂಸ್ಕೃತಿ. ಅಂಥ ಸ್ಥಿತಿಯಲ್ಲಿ ಅಹಿಂಸೆಯನ್ನೇ ಬೋಧಿಸುತ್ತಾ ಬಂದ ಸಂತರ ಮೇಲೆ ದಾಳಿ ನಡೆಯುವುದು, ಹತ್ಯೆಯಂಥ ಕ್ರೂರ ಮಾರ್ಗ ಹಿಡಿಯುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ.
ಜೈನಮುನಿ ಕಾಮಕುಮಾರ ನಂದಿ ಸ್ವಾಮೀಜಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜತೆಗೆ ಧರ್ಮವನ್ನು ಕಾಪಾಡುವುದು ಮತ್ತು ಧಾರ್ಮಿಕ ಸಂಸ್ಥೆಗಳಿಗೆ, ಮುಖಂಡರಿಗೆ ಸೂಕ್ತ ರಕ್ಷಣೆ ನೀಡುವುದು ಸರ್ಕಾರದ ಹೊಣೆ ಎಂದು ಅಭಿಪ್ರಾಯಪಟ್ಟಿದ್ದಾರೆ

300x250 AD
Share This
300x250 AD
300x250 AD
300x250 AD
Back to top