Slide
Slide
Slide
previous arrow
next arrow

ಸರಕುಳಿ ಪ್ರೌಢಶಾಲೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಯಶಸ್ವಿ

300x250 AD

ಸಿದ್ದಾಪುರ: ಸಿದ್ದಾಪುರ ತಾಲೂಕಾ ಪತ್ರಕರ್ತರ ಸಂಘ, ಸರಕುಳಿ ಶಿಕ್ಷಣ ಸಮಿತಿ, ಶ್ರೀ ಜಗದಂಬಾ ಪ್ರೌಢಶಾಲೆ ಸರಕುಳಿ, ಸ.ಹಿ.ಪ್ರಾ.ಶಾಲೆ ಸರಕುಳಿ ಇವರ ಸಂಯುಕ್ತ ಆಶ್ರಯದಲ್ಲಿ ಸರಕುಳಿ ಜಗದಂಬಾ ಪ್ರೌಢಶಾಲೆಯ ಸಭಾಭವನದಲ್ಲಿ ಜು.13ರಂದು ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಂಡು, ಅತ್ಯಂತ ಯಶಸ್ವಿಯಾಗಿ ನೆರವೇರಿಸಲಾಯಿತು.

ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ನರೇಂದ್ರ ಹೆಗಡೆ, ಹೊಂಡಗಾಶಿ ಇವರನ್ನು ಸನ್ಮಾನಿಸಲಾಯಿತು. ಹಿರಿಯ ಸಾಹಿತಿಗಳಾದ ಶ್ರೀನಿವಾಸ ವಿಠ್ಠಲ ಶಾನಭಾಗ, ಹಾರ್ಸಿಕಟ್ಟಾ‌ ಇವರಿಗೆ ಗುರುಮನೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಯಿತು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದ ಬಸವರಾಜ ಪಾಟೀಲ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಜಿ. ಸುಬ್ರಾಯ ಭಟ್ಟ‌, ಬಕ್ಕಳ, ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಗಂಗಾಧರ ಕೊಳಗಿ, ಸಿದ್ದಾಪುರ‌ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ.ಆಯ್.ನಾಯ್ಕ, ಸರಕುಳಿ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಮಂಜುನಾಥ ಹೆಗಡೆ, ತ್ಯಾರಗಲ್, ಸ.ಹಿ.ಪ್ರಾ.ಶಾಲೆ ಸರಕುಳಿಯ ಅಧ್ಯಕ್ಷರಾದ ಪ್ರಶಾಂತ ಹೆಗಡೆ ತಟ್ಟಿಕೈ, ಪ್ರಾಥಮಿಕ & ಪ್ರೌಢಶಾಲೆಯ ಎಲ್ಲಾ ಸಿಬ್ಬಂದಿಗಳು ಹಾಗೂ ಮಕ್ಕಳು, ಪತ್ರಿಕಾ ವಿತರಕರು, ನಾಗರಿಕರು, ಹಿತೈಷಿಗಳು ಮತ್ತಿತರರು ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top