Slide
Slide
Slide
previous arrow
next arrow

ಗಂಗಾವಳಿಯಲ್ಲಿ ಮೃತ ಮೀನುಗಾರನ ಕುಟುಂಬಕ್ಕೆ ಭೇಟಿ ನೀಡಿದ ಶಾಸಕ ದಿನಕರ ಶೆಟ್ಟಿ

300x250 AD

ಗೋಕರ್ಣ : ಇಲ್ಲಿ ಸಮೀಪದ ಗಂಗಾವಳಿಯ ನಿವಾಸಿ ಮಂಜುನಾಥ ಮಾಬ್ಲು ಅಂಬಿಗ (46) ಎನ್ನುವ ವ್ಯಕ್ತಿಯು ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದು, ಶಾಸಕ ದಿನಕರ ಶೆಟ್ಟಿ ಶನಿವಾರ ಇವರ ಮನೆಗೆ ಆಗಮಿಸಿ ಸಾಂತ್ವನ ಹೇಳಿ, ವಯಕ್ತಿಕವಾಗಿ ಸಹಾಯಧನ ನೀಡುವುದರ ಜತೆಗೆ ಸರಕಾರದಿಂದ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.

ನಾಡುಮಾಸ್ಕೇರಿ ಗ್ರಾಮ ಪಂಚಾಯತ ಅಧ್ಯಕ್ಷೆ ಧನುಶ್ರೀ ಅಂಕೋಲೆಕರ, ಹನೇಹಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷೆ ಭಾರತಿ ಗೌಡ, ತೊರ್ಕೆ ಗ್ರಾಮ ಪಂಚಾಯತ ಅಧ್ಯಕ್ಷ ಆನಂದು ಕವರಿ, ತಾ.ಪಂ. ಮಾಜಿ ಸದಸ್ಯ ಮಹೇಶ ಶೆಟ್ಟಿ, ಮಹಾಶಕ್ತಿಕೇಂದ್ರದ ಅಧ್ಯಕ್ಷ ಚಂದ್ರಶೇಖರ ನಾಯ್ಕ ಇತರರಿದ್ದರು.

300x250 AD
Share This
300x250 AD
300x250 AD
300x250 AD
Back to top