• Slide
    Slide
    Slide
    previous arrow
    next arrow
  • ಕೆರೆ ಒಡೆಯುವ ಸಾಧ್ಯತೆ: ಕಾಲುವೆ ಅಗಲೀಕರಣ

    300x250 AD

    ದಾಂಡೇಲಿ: ತಾಲೂಕಿನ ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೇರವಾಡದ ಕೆರೆ ಕಳೆದ ವರ್ಷದಂತೆ ಈ ವರ್ಷವೂ ತುಂಬಿದ್ದು, ಯಾವುದೇ ಸಂದರ್ಭದಲ್ಲಿ ಕೆರೆ ಒಡೆಯುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ತಾಲೂಕಾಡಳಿತ ಕೆರೆಗೆ ಸಂಬಂಧಿಸಿದ ಕಾಲುವೆಯನ್ನು ಅಗಲೀಕರಣಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿದೆ.

    ಕಳೆದ ವರ್ಷವೂ ಇಲ್ಲಿಯ ಕೆರೆ ತುಂಬಿ ಹೊಡೆದ ಪರಿಣಾಮವಾಗಿ ಸಾಕಷ್ಟು ಮನೆಗಳಿಗೆ ಹಾನಿಯಾಗಿತ್ತು. ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೇರವಾಡದ ಕೆರೆ ತುಂಬಿದ್ದು, ಈ ಬಗ್ಗೆ ಅಗತ್ಯ ಕ್ರಮವನ್ನು ಕೈಗೊಳ್ಳುವಂತೆ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರಾದ ಸುಭಾಷ್ ಭೋವಿವಡ್ಡರ್ ಅವರು ಸಂಬoಧಪಟ್ಟ ಅಧಿಕಾರಿಗಳಿಗೆ ಮನವಿಯನ್ನು ಮಾಡಿದ್ದರು.
    ಅಂತೆಯೇ ಸ್ಥಳಕ್ಕಾಗಮಿಸಿದ ಕಂದಾಯ ನಿರೀಕ್ಷಕರಾದ ರಾಘವೇಂದ್ರ ಪಾಟೀಲ್ ಅವರ ನೇತೃತ್ವದಲ್ಲಿ ಆಲೂರು ಗ್ರಾಮ ಪಂಚಾಯತಿಯಡಿ ಜೆಸಿಬಿಯ ಮೂಲಕ ಕೆರೆಯ ಕಾಲುವೆಯನ್ನು ಅಗಲೀಕರಣಗೊಳಿಸುವ ಕಾರ್ಯವನ್ನು ಆರಂಭಿಸಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top