• Slide
    Slide
    Slide
    previous arrow
    next arrow
  • ಈಡಿಗ ಮಹಾಮಂಡಳಿಯ ಸಭೆಗೆ ಕೇಂದ್ರ ಸಚಿವರಿಗೆ ಆಹ್ವಾನ

    300x250 AD

    ಅಂಕೋಲಾ: ಸಪ್ಟೆಂಬರ್ 10 ರಂದು ನಡೆಯುವ ರಾಜ್ಯಮಟ್ಟದ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಪ್ರಮುಖರ ಸಭೆಗೆ ಆಗಮಿಸುವಂತೆ ಶ್ರೀ ನಾರಾಯಣಗುರು ಶ್ರೀ ಪ್ರಣವಾನಂದ ಸ್ವಾಮೀಜಿಯವರು ಕೇಂದ್ರ ಪ್ರವಾಸೋದ್ಯಮ ಮತ್ತು ಬಂದರು ಇಲಾಖೆಯ ಸಚಿವರಾದ ಶ್ರೀಪಾದ ನಾಯ್ಕ ಅವರನ್ನು ಆಹ್ವಾನಿಸಿದ್ದಾರೆ.

    ಶ್ರೀಗಳು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಅವರ ಗೋವಾದ ನಿವಾಸಕ್ಕೆ ತೆರಳಿ ಸಮಾಜದ ಪ್ರಮುಖರ ಸಭೆಗೆ ಆಗಮಿಸಿ ತಮ್ಮ ಸೂಕ್ತ ಸಲಹೆಗಳನ್ನು ನೀಡಬೇಕು. ನಮ್ಮ ಸಮುದಾಯಕ್ಕೆ ಸಿಗಬೇಕಾದ ಸಾಮಾಜಿಕ ನ್ಯಾಯವನ್ನು ಪಡೆದುಕೊಳ್ಳಲು ಮತ್ತೆ ಹೋರಾಟ ಕೈಗೊಳ್ಳುವ ಅಗತ್ಯವಿದೆ ಎಂದು ಸಚಿವರಲ್ಲಿ ಶ್ರೀಗಳು ಮಾತುಕತೆ ನಡೆಸಿದರು.

    300x250 AD

    ಈ ಸಂದರ್ಭದಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ರಾಜ್ಯ ಪ್ರಮುಖರು ಉಪಸ್ಥಿತರಿದ್ದರು ಎಂದು ಉ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಕೊಂಡಳ್ಳಿ, ಅಂಕೋಲಾ ತಾಲೂಕು ಘಟಕದ ಅಧ್ಯಕ್ಷ ಡಿ.ಜಿ. ನಾಯ್ಕ, ಗೌರವಾಧ್ಯಕ್ಷ ಮಾದೇವ ಎಂ. ನಾಯ್ಕ, ಉಪಾಧ್ಯಕ್ಷರಾದ ಉಮೇಶ ಎನ್. ನಾಯ್ಕ, ರಮೇಶ ಎಸ್. ನಾಯ್ಕ, ಸಂಜಯ ಆರ್. ನಾಯ್ಕ, ಯುವ ಅಧ್ಯಕ್ಷ ಮಂಜುನಾಥ ಕೆ. ನಾಯ್ಕ, ಖಜಾಂಚಿ ಶ್ರೀಪಾದ ಟಿ. ನಾಯ್ಕ, ಮಹಿಳಾ ಜಿಲ್ಲಾಧ್ಯಕ್ಷೆ ಮಂಜುಳಾ ನಾಯ್ಕ, ತಾಲೂಕು ಅಧ್ಯಕ್ಷ ಲೀಲಾವತಿ ಎಸ್. ನಾಯ್ಕ, ಖಾಜಾಂಚಿ ಶ್ರೀಪಾದ ಟಿ. ನಾಯ್ಕ, ಪಧಾನ ಕಾರ್ಯದರ್ಶಿ ನಾಗರಾಜ ಮಂಜಗುಣಿ, ಕಾರ್ಯದರ್ಶಿ ವಸಂತ ವಿ. ನಾಯ್ಕ, ಸದಸ್ಯ ರಮೇಶ ಎನ್. ನಾಯ್ಕ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top