Slide
Slide
Slide
previous arrow
next arrow

ನೌಕರರ ಸಂಘದ ತೇಜೋವಧೆ: ಕ್ರಮಕ್ಕೆ ಆಗ್ರಹ

300x250 AD

ಅಂಕೋಲಾ: ನೌಕರರ ಹಿತಕಾಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ, ಜಿಲ್ಲಾ, ತಾಲೂಕು ಘಟಕಗಳ ವಿರುದ್ಧ ಆಧಾರ ರಹಿತವಾಗಿ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕ ಒತ್ತಾಯಿಸಿದೆ.

ಗುರುವಾರ ಮನವಿ ಸಲ್ಲಿಸಿದ ಸಂಘಟನೆಯ ಪ್ರಮುಖರು, ಸಂಘಟನೆಯ ವಿರುದ್ಧ ಸುಳ್ಳು ಆರೋಪ ಮಾಡಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಸಂಘಟನೆಯನ್ನು ದುಬರ್ಲಗೊಳಿಸುವ ದುರುದ್ದೇಶದಿಂದ ವಿವಿಧ ಇಲಾಖೆಯ ಕೆಲ ಅಧಿಕಾರಿಗಳು ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿರುವುದೂ ಅಲ್ಲದೇ ದೂರಿನ ಪ್ರತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಸಂಘಟನೆಯ ಘನತೆಗೆ ಮಸಿ ಬಳಿಯುವ ಕೆಲಸ ಮಾಡುವುದು ವಿಷಾದನೀಯ. ಸಂಘಟನೆ ಹಾಗೂ ಪದಾಧಿಕಾರಿಗಳ ವಿರುದ್ಧ ಸುಳ್ಳು ಆರೋಪ ಮಾಡಿರುವ ವಿವಿಧ ಇಲಾಖೆಯ ಐವರು ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

300x250 AD

ಮನವಿ ಸಲ್ಲಿಸುವ ವೇಳೆ ಸಂಘದ ಅಧ್ಯಕ್ಷ ಬಾಲಚಂದ್ರ ನಾಯಕ, ಕಾರ್ಯದರ್ಶಿ ಗಣಪತಿ ನಾಯ್ಕ, ರಾಜ್ಯ ಪರಿಷತ್ ಸದಸ್ಯ ಜಗದೀಶ ಜಿ.ನಾಯಕ ಹೊಸ್ಕೇರಿ, ಖಜಾಂಚಿ ಗಿರೀಶ ನಾಯಕ, ಉಪಾಧ್ಯಕ್ಷರಾದ ಪ್ರಮೋದ ದೊಡ್ಮನೆ, ಕೃಷ್ಣಮೂರ್ತಿ ಮೇಗಲಮನೆ ಪದಾಧಿಕಾರಿಗಳಾದ ರಫೀಕ್ ಶೇಖ್, ರವಿ ಕೋಟೆಬಾವಿ ಮುಂತಾದವರಿದ್ದರು..

Share This
300x250 AD
300x250 AD
300x250 AD
Back to top