• Slide
    Slide
    Slide
    previous arrow
    next arrow
  • ಇಂದು ಶಿರಸಿಯಲ್ಲಿ ಪತ್ರಿಕಾ ದಿನಾಚರಣೆ: ಮಾಧ್ಯಮ ಶ್ರೀ ಪ್ರಶಸ್ತಿ ಪ್ರದಾನ

    300x250 AD

    ಶಿರಸಿ :ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಹಾಗೂ ಮಾಧ್ಯಮ ಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜು.29ರ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ‌

    ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸುವರು. ಈ ಸಂದರ್ಭದಲ್ಲಿ ವರದಿಗಾರ ಗುರು ಅಡಿ ಅವರಿಗೆ ಮಾಧ್ಯಮ ಶ್ರೀ‌ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಶಾಸಕ ಶಿವರಾಮ ಹೆಬ್ಬಾರ ಪ್ರಶಸ್ತಿ ಪ್ರದಾನ ಮಾಡುವರು. ಮುಖ್ಯ ಅತಿಥಿಗಳಾಗಿ ವಿಸ್ತಾರ ಮಿಡಿಯಾ ನಿರ್ದೇಶಕ ಶ್ರೀನಿವಾಸ ಹೆಬ್ಬಾರ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಸುಬ್ರಾಯ ಭಟ್ಟ ಬಕ್ಕಳ ಭಾಗವಹಿಸುವರು. ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂದೇಶ ಭಟ್ಟ ಬೆಳಖಂಡ ಅಧ್ಯಕ್ಷತೆ ವಹಿಸುವರು ಎಂದು ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಕೆರೆಗದ್ದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top