Slide
Slide
Slide
previous arrow
next arrow

ದಸರಾದಲ್ಲಿ ಏರ್ ಶೋ ನಡೆಸಲು ರಾಜನಾಥ್ ಸಿಂಗ್’ಗೆ ಮನವಿ ನೀಡಿದ ಸಿಎಂ ಸಿದ್ದರಾಮಯ್ಯ

300x250 AD

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಯಾಗಿ ಮೈಸೂರು ದಸರಾ ಕಾರ್ಯಕ್ರಮದಲ್ಲಿ ವಿಶೇಷ ಏರ್ ಶೋ ನಡೆಸುವಂತೆ ಮನವಿ ಮಾಡಿದ್ದಾರೆ.

ದೆಹಲಿಯ ಸಂಸತ್ ಭವನದಲ್ಲಿರುವ ರಾಜನಾಥ್ ಸಿಂಗ್ ಕಚೇರಿಯಲ್ಲಿ ಭೇಟಿಯಾಗಿ ಈ ಸಂಬಂಧ ಮಾತುಕತೆ ನಡೆಸಿದ ಸಿದ್ದರಾಮಯ್ಯ, ಮೈಸೂರು ದಸರಾ ರಾಜ್ಯದ ಗತವೈಭವ ಮತ್ತು ಇತಿಹಾಸವನ್ನು ಸಾರುವ ಹಬ್ಬವಾಗಿದೆ. ಇದನ್ನು ನೋಡಲು ಲಕ್ಷಾಂತರ ಪ್ರವಾಸಿಗರು ರಾಜ್ಯಕ್ಕೆ ಆಗಮಿಸುತ್ತಾರೆ. ಈ ವರ್ಷವೂ ಅಕ್ಟೋಬರ್ 15-24 ರವರೆಗೂ ಅಚರಿಸಲು ನಿರ್ಧರಿಸಿದೆ ಎಂದರು.2017 ಮತ್ತು 2019 ರಲ್ಲಿ ಟಾರ್ಚ್ ಲೈಟ್ ಪರೇಡ್ ಮೈದಾನದಲ್ಲಿ ವಾಯುಪಡೆ ವಿಶೇಷ ಏರ್ ಶೋ ನಡೆಸಿತ್ತು. ಬಹಳಷ್ಟು ಜನರು ಇದನ್ನು ನೋಡಿ ಸಂತಸಪಟ್ಟಿದ್ದರು. ಈ ವರ್ಷವೂ ವಾಯುಪಡೆಗಳಿಂದ ವಿಶೇಷ ಏರ್ ಶೋ ನಡೆಸಲು ನಿರ್ದೇಶಿಸಬೇಕು ಎಂದು ಮನವಿ ಮಾಡಿದರು. ಮನವಿ ಸ್ವೀಕರಿಸಿದ ರಾಮನಾಥ್ ಸಿಂಗ್ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದರು ಎಂದು ವರದಿಗಳು ತಿಳಿಸಿವೆ.

300x250 AD
Share This
300x250 AD
300x250 AD
300x250 AD
Back to top