Slide
Slide
Slide
previous arrow
next arrow

ಅರಗ ಜ್ಞಾನೇಂದ್ರ ಕ್ಷಮೆ ಯಾಚಿಸಬೇಕು: ಬಸವರಾಜ ದೊಡ್ಮನಿ

300x250 AD

ಶಿರಸಿ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕ್ಷಮೆ ಯಾಚಿಸಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ದೊಡ್ಮನಿ ಆಗ್ರಹಿಸಿದ್ದಾರೆ. ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಐಸಿಸಿ ರಾಷ್ಟೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ತಮ್ಮ ಮಾತಿನ ಭರದಲ್ಲಿ ಎಐಸಿಸಿ ಅಧ್ಯಕ್ಷರ ಮೈ ಬಣ್ಣದ ಬಗ್ಗೆ ತಮ್ಮ ಮನುಸ್ಮೃತಿ ಮನಸ್ಥಿತಿಯನ್ನು ವಕ್ತಪಡಿಸಿದ್ದಾರೆ. ಅವರು ಆಡಿರುವ ಮಾತುಗಳಿಂದ ಇಡೀ ದಲಿತ ಸಮುದಾಯಕ್ಕೆ ಎಸಗಿರುವ ದೊಡ್ಡ ಅಪಮಾನವಾಗಿದೆ ಎಂದಿದ್ದಾರೆ.
ಈ ಕೂಡಲೆ ಆರಗ ಜ್ಞಾನೇಂದ್ರ ಅವರು ಆಡಿರುವ ಮಾತಿಗೆ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಅರಗಾ ಜ್ಞಾನೇಂದ್ರರವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top