Slide
Slide
Slide
previous arrow
next arrow

ನಿವೃತ್ತ ನಗರಸಭೆ ಸಿಬ್ಬಂದಿಗಳಿಗೆ ಬೀಳ್ಕೊಡುಗೆ

300x250 AD

ದಾಂಡೇಲಿ: ನಗರಸಭೆಯಲ್ಲಿ ಕಳೆದ 30 ವರ್ಷಗಳಿಗಿಂತಲೂ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಇಬ್ಬರು ಸಿಬ್ಬಂದಿಗಳಿಗೆ ನಗರಸಭೆಯ ವತಿಯಿಂದ ಗೌರವ ಸನ್ಮಾನದೊಂದಿಗೆ ಬೀಳ್ಕೊಡಲಾಯಿತು. ನಗರಸಭೆಯ ನೀರು ಸರಬರಾಜು ವಿಭಾಗದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಮಂಜುನಾಥ ನಾಯ್ಕ ಮತ್ತು ರುದ್ರಭೂಮಿ ಕಾವಲುಗಾರರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸಣ್ಣ ವೀರಭದ್ರ ಪುಲ್ಲಯ್ಯ ಹರಿಜನ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿ, ಬೀಳ್ಕೊಡಲಾಯಿತು.

ಈ ಇಬ್ಬರ ಸೇವೆಯನ್ನು ಪೌರಾಯುಕ್ತರಾದ ಆರ್.ಎಸ್.ಪವಾರ್ ಕೊಂಡಾಡಿ, ನಿವೃತ್ತ ಜೀವನವು ಸುಖಕರವಾಗಿರೆಂದು ಶುಭವನ್ನು ಹಾರೈಸಿದರು. ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಮಂಜುನಾಥ್ ನಾಯ್ಕ ಮತ್ತು ಸಣ್ಣ ವೀರಭದ್ರ, ನಮಗೆ ಇಷ್ಟು ವರ್ಷಗಳವರೆಗೆ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಸರ್ವರಿಗೂ ಕೃತಜ್ಞತೆಗಳನ್ನು ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ನಿಮ್ಮೆಲ್ಲರ ಪ್ರೀತಿ, ವಾತ್ಸಲ್ಯ ಸದಾ ಇರಲೆಂದರು. ವೇದಿಕೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ನಾಯ್ಕರ್, ಹಿರಿಯ ಸದಸ್ಯೆ ಯಾಸ್ಮಿನ್ ಕಿತ್ತೂರು, ವ್ಯವಸ್ಥಾಪಕ ಪರಶುರಾಮ ಶಿಂಧೆ, ಸ್ಥಳೀಯ ಸಂಸ್ಥೆಗಳ ನೌಕರರ ಸಂಘದ ಅಧ್ಯಕ್ಷರಾದ ಮೈಕಲ್ ಫರ್ನಾಂಡಿಸ್ ಮತ್ತು ಸಂಘದ ಪದಾಧಿಕಾರಿಗಳಾದ ಬಾಳು ಗವಸ್, ಶ್ರೀನಿವಾಸ್ ಮೊದಲಾದವರು ಉಪಸ್ಥಿತರಿದ್ದರು. ಕರ‍್ಯಕ್ರಮದಲ್ಲಿ ನಗರ ಸಭೆಯ ಸದಸ್ಯರು, ನಗರ ಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top