Slide
Slide
Slide
previous arrow
next arrow

ಶಿರಸಿಯಲ್ಲಿ ಭೀಕರ ಅಪಘಾತ: ಸ್ಕೂಟರ್ ಸವಾರನ ದುರ್ಮರಣ

300x250 AD

ಶಿರಸಿ: ನಗರದ ಯಲ್ಲಾಪುರ ರಸ್ತೆಯ ಅಂಬೇಡ್ಕರ್ ಭವನದ ಬಳಿ ಕೆ.ಎಸ್‌.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಮೃತಪಟ್ಟ ಸವಾರನನ್ನು ದೇವದಕೆರೆಯ ಗಣೇಶ ಬಾಲಕೃಷ್ಣ ಕರಾರ ಎಂದು ಗುರುತಿಸಲಾಗಿದೆ. ಅಪಘಾತದ ಪರಿಣಾಮ ಸ್ಕೂಟರ್ ನುಜ್ಜುಗುಜ್ಜಾಗಿದ್ದು, ಗಾಯಗೊಂಡಿದ್ದ ಸವಾರನನ್ನು ನಗರದ ಪಂಡಿತ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ಸ್ಥಳಕ್ಕೆ ಸಿಪಿಐ ರಾಮಚಂದ್ರ ನಾಯಕ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top