Slide
Slide
Slide
previous arrow
next arrow

ಆ.12ಕ್ಕೆ ಶಿರಸಿಯಲ್ಲಿ ಗ್ರಂಥಪಾಲಕರ ದಿನಾಚರಣೆ

300x250 AD

ಶಿರಸಿ: ನಗರದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಆಗಸ್ಟ್ 12ರ ಬೆಳಗ್ಗೆ 11ಕ್ಕೆ ಗ್ರಂಥಪಾಲಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ತಾಲೂಕು ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸಲಿದ್ದು ತಾಲೂಕು ಮೇಲ್ವಿಚಾರಕರ ಸಂಘದ ಅಧ್ಯಕ್ಷ ಚಂದ್ರು ಎಸ್. ಮಾದರ್ ಅಧ್ಯಕ್ಷತೆ ವಹಿಸುವರು. ಈ ಸಂದರ್ಭದಲ್ಲಿ ಜಾನ್ಮನೆ ಗ್ರಾಪಂ ಗ್ರಂಥಾಲಯ ನಿವೃತ್ತ ಮೇಲ್ವಿಚಾರಕ ಮಧುಕರ ಆರ್.ಹೆಗಡೆ, ನೆಗ್ಗು ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕ ಧನಂಜಯ ಆರ್.ಹೆಗಡೆ ಅವರನ್ನು ಸನ್ಮಾನಿಸಲಾಗುತ್ತದೆ.
ಮುಖ್ಯ ಅತಿಥಿಗಳಾಗಿ ತೋಟಗಾರಿಕಾ ಉಪನಿರ್ದೇಶಕ ಡಾ.ಬಿ.ಪಿ.ಸತೀಶ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸತೀಶ ಹೆಗಡೆ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ, ಗ್ರಾಮೀಣ ಉದ್ಯೋಗ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಾಯಕ ನಿರ್ದೇಶಕ ರಾಮೂರ್ತಿ ಬಿ.ವಾಯ್, ತಾಪಂ ವ್ಯವಸ್ಥಾಪಕ ಸುಬ್ರಾಯ ಭಟ್ಟ, ಗ್ರಂಥಾಲಯ ಪ್ರಾಧಿಕಾರ ಮಾಜಿ ಸದಸ್ಯ ವಿ.ಪಿ.ಹೆಗಡೆ ವೈಶಾಲಿ, ನಿವೃತ್ತ ಪ್ರಾಚಾರ್ಯ ಪ್ರೊ.ಕೆ.ಎನ್. ಹೊಸ್ಮನಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top