• Slide
    Slide
    Slide
    previous arrow
    next arrow
  • ಆ.12ಕ್ಕೆ ಕ್ಯಾನ್ಸರ್ ವೈದ್ಯಕೀಯ ಜಾಗೃತ ಶಿಬಿರ

    300x250 AD

    ಶಿರಸಿ: ಸ್ಥಳೀಯ ವಿದ್ಯಾಧಿರಾಜ ಕಲಾಕ್ಷೇತ್ರದಲ್ಲಿ ಆ.12, ಶನಿವಾರ ಮುಂಜಾನೆ 10 ಗಂಟೆಗೆ ವಿಶೇಷ ತಜ್ಞರಿಂದ ಏರ್ಪಡಿಸಿದ ‘ಕ್ಯಾನ್ಸರ್- ವೈದ್ಯಕೀಯ ಶಿಬಿರ’ದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಸ್ಪಂದನಾ ಗ್ರಾಮೀಣಾಭಿವೃದ್ಧಿ ವೇದಿಕೆಯ ಅಧ್ಯಕ್ಷ ಹಾಗೂ ನ್ಯಾಯವಾದಿ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     ಸ್ಪಂದನಾ ಗ್ರಾಮೀಣಾಭಿವೃದ್ಧಿ ವೇದಿಕೆ, ಸಿಟಿ ಯೂನಿಯನ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ಇದರ ಆಶ್ರಯದಲ್ಲಿ ಜಸ್ಟಿಸ್ ಕೆ.ಎಸ್ ಹೆಗ್ಗಡೆ, ಚಾರಿಟೇಬಲ್ ಹಾಸ್ಪಿಟಲ್, ಮಂಗಳೂರು ಇವರ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಜಾಗೃತ ಶಿಬಿರದಲ್ಲಿ ವೈದ್ಯಕೀಯ ಮಾಹಿತಿಯನ್ನು ಖ್ಯಾತ ಕ್ಯಾನ್ಸರ್ ತಜ್ಞರಾದ ಡಾ. ವಿನಯ್ ಕುಮಾರ್ ಜೆ. ರಾಜೇಂದ್ರ, ಮಂಗಳೂರು ಅವರು ನೀಡಲಿದ್ದು, ಹಿರಿಯ ಪತ್ರಕರ್ತೆ ಹಾಗೂ ಕ್ಯಾನ್ಸರ್ ರೋಗಿಗಳ ಆಪ್ತ ಸಮಾಲೋಚಕಿ, ಕೃಷ್ಣಿ ಶಿರೂರು ಹುಬ್ಬಳ್ಳಿ ಇವರು ಉದ್ಘಾಟಿಸಲಿದ್ದಾರೆ.

     ಆಸಕ್ತರು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಲು ರವೀಂದ್ರ ನಾಯ್ಕ ಕೋರಿದ್ದಾರೆ.

    300x250 AD

    Share This
    300x250 AD
    300x250 AD
    300x250 AD
    Leaderboard Ad
    Back to top