Slide
Slide
Slide
previous arrow
next arrow

ಆ.13ಕ್ಕೆ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಟೋ ರಿಕ್ಷಾ ಚಾಲಕ, ಮಾಲಕರಿಗೆ ಉಚಿತ ಸಮವಸ್ತ್ರ ವಿತರಣೆ

300x250 AD

ಶಿರಸಿ: ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಿರಸಿ ತಾಲೂಕಾ ಆಟೋ ರಿಕ್ಷಾ & ಗೂಡ್ಸ್ ರಿಕ್ಷಾ ಚಾಲಕ ಮಾಲಕರಿಗೆ ಔತಣಕೂಟ, ಉಚಿತ ಸಮವಸ್ತ್ರ ವಿತರಣೆ ಮತ್ತು ಆಟೋ ರಿಕ್ಷಾ ಪಾಸಿಂಗ್ ಯೋಜನೆ ಹಾಗೂ ಆಟೋ ರಿಕ್ಷಾ ಪ್ರಿಂಟಿಂಗ್ ಹುಡ್ ವಿತರಣೆ ಕಾರ್ಯಕ್ರಮವನ್ನು ಆ.13, ರವಿವಾರ ಬೆಳಿಗ್ಗೆ 10.30 ಕ್ಕೆ ನಗರದ ಅಂಬೇಡ್ಕರ್ ಸಭಾಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿ ವೈ. ಎನ್. ಪಡಸಾಲಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅನಂತಮೂರ್ತಿ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಅನಂತಮೂರ್ತಿ‌ ಹೆಗಡೆ ವಹಿಸಲಿದ್ದಾರೆ.

ಶಿರಸಿ ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಉಪೇಂದ್ರ ಪೈ, ಹಾಗೂ ಉತ್ತರ ಕನ್ನಡ ಮತ್ತು ಹೊನ್ನಾವರ ಆಟೋ ರಿಕ್ಷಾ ಚಾಲಕರ ಮಾಲಕರ ಸಂಘದ ಅಧ್ಯಕ್ಷ ಶಿವರಾಜ ಮೇಸ್ತಾ ಉಪಸ್ಥಿತರಿರಲಿದ್ದು, ಮುಖ್ಯ ಅತಿಥಿಗಳಾಗಿ ಪೋಲಿಸ್ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್, ಸ್ಕೋಡವೇಸ್ ಕಾರ್ಯನಿರ್ವಾಹಕ ಡಾ.ವೆಂಕಟೇಶ್ ನಾಯ್ಕ್, ಅಂತರಾಷ್ಟ್ರೀಯ ಮಾನವ ಹಕ್ಕು ಆಯೋಗದ ಜಿಲ್ಲಾಧ್ಯಕ್ಷ ಮಂಜುನಾಥ್ ನಾಗ ಮೊಗೇರ್, ನರೆಬೈಲ್ ಗ್ರೂಪ್ ಸಹಕಾರಿ ಸಂಘದ ಅಧ್ಯಕ್ಷ ಎಸ್. ಎನ್. ಹೆಗಡೆ ಆಗಮಿಸಲಿದ್ದಾರೆ.

300x250 AD

ಪ್ರಾಸ್ತಾವಿಕ‌ ಭಾಷಣವನ್ನು ಗುರುಪ್ರಸಾದ ಸುಬ್ರಾಯ ಭಟ್,ಹಾಗೂ ಕಾರ್ಯಕ್ರಮದ ನಿರೂಪಣೆ ಮತ್ತು ವಂದನಾರ್ಪಣೆಯನ್ನು ಪರಮಾನಂದ ಹೆಗಡೆ ಮಾಡಲಿದ್ದಾರೆ. ಸರ್ವರೂ ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಲು ಸಂಘಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Share This
300x250 AD
300x250 AD
300x250 AD
Back to top