Slide
Slide
Slide
previous arrow
next arrow

ದೇಶಭಕ್ತಿ ಸ್ಪರ್ಧೆ: ಲಯನ್ಸ್ ವಿದ್ಯಾರ್ಥಿಗಳ ಸಾಧನೆ

300x250 AD

ಶಿರಸಿ: ಇಲ್ಲಿನ ರಾಘವೇಂದ್ರ ಮಠದಲ್ಲಿ ಆ.13, ಭಾನುವಾರದಂದು ಮಾರುತಿ ಸೇವಾ ಸಂಸ್ಥೆ ಗಣೇಶ ನಗರ ಶಿರಸಿ , ಮಾರಿಕಾಂಬಾ ಆಸ್ಪತ್ರೆ ಮತ್ತು ಡಯಾಗ್ನೋಟಿಕ್ ಸೆಂಟರ್ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ತಾಲೂಕಾ ಮಟ್ಟದ ದೇಶಭಕ್ತಿ ಸ್ಪರ್ಧೆಯಲ್ಲಿ ಲಯನ್ಸ್ ಶಾಲಾ ವಿದ್ಯಾರ್ಥಿಗಳಾದ ಪ್ರಣತಿ ಹೆಗಡೆ ಪ್ರಥಮ, ಕಲ್ಯಾಣ ಭಟ್ ಸಮಾಧಾನಕರ ಬಹುಮಾನ, ಪ್ರಾಥಮಿಕ ವಿಭಾಗದಲ್ಲಿ , ಹಾಗೆಯೇ ಪ್ರೌಢಶಾಲಾ ವಿಭಾಗದಲ್ಲಿ ಧಾತ್ರಿ ಹೆಗಡೆ ಮತ್ತು ಜೀವಿಕಾ ಗೌಡ ಸಮಾಧಾನಕರ ಬಹುಮಾನ ಪಡೆದಿರುತ್ತಾರೆ. ಬಹುಮಾನ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ಶಾಲೆಯ ಸಂಗೀತ ಶಿಕ್ಷಕರಾದ ಶ್ರೀಮತಿ ದೀಪಾ ಶಶಾಂಕ ಹೆಗಡೆ, ಸಹಕರಿಸಿದ ಪಾಲಕರಿಗೆ ಧನ್ಯವಾದಗಳನ್ನು ಲಯನ್ ಶಿಕ್ಷಣ ಸಂಸ್ಥೆಯು ಸಮರ್ಪಿಸಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಶಾಲೆಯ ಪ್ರಾಂಶುಪಾಲ ಶಶಾಂಕ ಹೆಗಡೆ, ಶಿಕ್ಷಕ-ಶಿಕ್ಷಕೇತರ ವೃಂದ, ಲಯನ್ಸ್ ಬಳಗ ಮತ್ತು ಪಾಲಕರ ವೃಂದ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top