ಕಾರವಾರ: ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗ ಕಚೇರಿಯಲ್ಲಿ ಗ್ರಾಹಕರ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಿದ್ಯುತ್ ಅದಾಲತ್ನ್ನು ಆ.19 ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಗ್ರಾಹಕರ ಸಂವಾದ ಸಭೆಯನ್ನು ಮಧ್ಯಾಹ್ನ 3.30ರಿಂದ ಸಂಜೆ 5.30ವರೆಗೆ ಆಯೋಜಿಸಲಾಗಿದೆ.
ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳೇನಾದರು ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ನೀಡಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಆ.19ಕ್ಕೆ ವಿದ್ಯುತ್ ಅದಾಲತ್
