• Slide
    Slide
    Slide
    previous arrow
    next arrow
  • ವ್ಯಕ್ತಿಯ ಮೇಲೆ ಕರಡಿ ದಾಳಿ: ಪ್ರಾಣಾಪಾಯದಿಂದ ಪಾರು

    300x250 AD

    ಮುಂಡಗೋಡು: ತಾಲೂಕಿನ ಪಾಳಾ ಅರಣ್ಯದಲ್ಲಿ ರವಿವಾರ ವ್ಯಕ್ತಿಯ ಮೇಲೆ ಕರಡಿ ದಾಳಿ ಮಾಡಿದ್ದು ಅದೃಷ್ಟವಶಾತ್ ಪಾರಾದ ಘಟನೆ ನಡೆದಿದೆ.

    ಪಾಳಾ ಗ್ರಾಮದ ಚಿಕ್ಕಪ್ಪ ನಿಂಗಪ್ಪ ಮಾವುರ ಕರಡಿ ದಾಳಿಯಿಂದ ಗಾಯಗೊಂಡ ವ್ಯಕ್ತಿಯಾಗಿದ್ದು ಪಾಳಾ ಸರ್ವೆ 11 ರ ಅರಣ್ಯದಲ್ಲಿ ದನ ಮೇಯಿಸಲು ಹೋದಾಗ ಎರಡು ಮರಿ ಜೊತೆ ದೊಡ್ಡ ಕರಡಿ ಪ್ರತ್ಯಕ್ಷವಾಗಿ ಏಕಾಏಕಿ ಚಿಕ್ಕಪ್ಪನ ಮೇಲೆ ದಾಳಿ ಮಾಡಿದೆ. ಗಾಬರಿಗೊಂಡು ಚಿಕ್ಕಪ್ಪ ಕೂಗಾಡಿದಾಗ ಅಲ್ಲೇ ಪಕ್ಕದಲ್ಲಿ ದನ ಮೇಯಿಸುತ್ತಿದ್ದ ಸುರೇಶ ಎಂಬುವರು ಧ್ವನಿ ಕೇಳಿ ಸ್ಥಳಕ್ಕೆ ಬಂದಾಗ ಕರಡಿ ದಾಳಿ ಮಾಡುತ್ತಿರುವುದು ನೋಡಿ ದೊಣ್ಣೆಯಿಂದ ಅವುಗಳನ್ನು ಓಡಿಸಿದ್ದಾನೆ. ಇದರಿಂದ ಚಿಕ್ಕಪ್ಪನಿಗೆ ಕೈ ಮತ್ತು ಎದೆಯ ಮೇಲೆ ಗಾಯವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಾಯಾಳು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆಂದು ತಿಳಿದುಬಂದಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top