• Slide
    Slide
    Slide
    previous arrow
    next arrow
  • ದರೋಡೆ ಮಾಡುತ್ತಿದ್ದ ಖದೀಮರಿಗೆ ಸಾರ್ವಜನಿಕರಿಂದ ಥಳಿತ

    300x250 AD

    ಸಿದ್ದಾಪುರ : ತಾಲೂಕಿನ ಕಂಚಿಕೈನಲ್ಲಿ ರಸ್ತೆಯಲ್ಲಿ ವಾಹನ ಅಡ್ಡಗಟ್ಟಿ ದರೋಡೆ ಮಾಡುತಿದ್ದ ಖದೀಮರನ್ನು ಸ್ಥಳೀಯರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

    ಶಿರಸಿ ಮೂಲದ ಶಫಿ,ಶಿವಮೊಗ್ಗ ಮೂಲದ ಟಿಪ್ಪುನಗರದ ಇರ್ಪಾನ್ ಜನರಿಂದ ಥಳಿತಕ್ಕೊಳಗಾದ ದರೋಡೆಕೋರರಾಗಿದ್ದು ಕುಮಟಾಕ್ಕೆ ಆಗಮಿಸಿದ್ದ ಇವರು ಬೈಕ್ ಕದ್ದು ದೇವಿಮನೆ ಘಟ್ಟದಲ್ಲಿ ಓರ್ವ ವಾಹನ ಸವಾರನನ್ನು ಅಡ್ಡಗಟ್ಟಿ ದರೋಡೆ ನಡೆಸಿ ನಂತರ ಸಿದ್ದಾಪುರ -ಕಂಚಿಕೈ ಮಾರ್ಗದ ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತಿದ್ದ ಸುಬ್ರಹ್ಮಣ್ಯ ಎಂಬ ಯುವಕನನ್ನು ಅಡ್ಡಗಟ್ಟಿ ಚಾಕು ತೋರಿಸಿ ಹಣ ದರೋಡೆಮಾಡುವಾಗ ಸ್ಥಳೀಯ ಗ್ರಾಮಸ್ಥರು ಗಮನಿಸಿ ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

    300x250 AD

    ಘಟನೆ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಥಳಿತದಿಂದ ಗಂಭೀರ ಗಾಯಗೊಂಡಿದ್ದ ಇಬ್ಬರು ದರೋಡೆಕೋರರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top