Slide
Slide
Slide
previous arrow
next arrow

ನಾನು ಈಗಲೂ ಬಿಜೆಪಿಯಲ್ಲಿದ್ದೇನೆ, ಮುಂದೆಯೂ ಬಿಜೆಪಿಯಲ್ಲಿಯೇ ಇರುತ್ತೇನೆ: ಶಿವರಾಮ ಹೆಬ್ಬಾರ್

300x250 AD

ಮುಂಡಗೋಡ : ನಾನು ಬಿಜೆಪಿ ಶಾಸಕನಾಗಿ ಈಗಲು ಬಿಜೆಪಿಯಲ್ಲಿದ್ದೇನೆ, ಮುಂದೆಯೂ ಸಹ ಭಾರತೀಯ ಜನತಾ ಪಕ್ಷದಲ್ಲಿಯೇ ಇರುತ್ತೇನೆ. ವದಂತಿಗಳನ್ನು ಹರಡಿದವರಾರೆಂಬುದರ ಬಗ್ಗೆ ನನಗೆ ಯಾವುಯ ಮಾಹಿತಿ ಇಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ್ ಅವರು ಹೇಳಿದರು.

ತಾಲೂಕಿನ ಬಡ್ಡಿಗೇರಿ ಗ್ರಾಮದಲ್ಲಿ ಶಾಲೆ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನನ್ನ ಕ್ಷೇತ್ರದ ರೈತರ ತೋಟ ಗದ್ದೆಗಳೆಲ್ಲ ಮಳೆ ಇಲ್ಲದೆ ಬರದ ಛಾಯೆ ಆವರಿಸಿದೆ ಇಂತಹ ಸಂದಿಗ್ಧ ಸಮಯದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮುಂಡಗೋಡು, ಬನವಾಸಿ, ಯಲ್ಲಾಪುರ ಮತ್ತು ಶಿರಸಿ ಕೆಲವು ಭಾಗವನ್ನು ಬರ ಪೀಡಿತ ಎಂದು ಘೋಷಿಸಿ ಕೃಷಿಕನಿಗೆ ಧೈರ್ಯ ತುಂಬಬೇಕಿದೆ ಹಾಗಾಗಿ ಮುಖ್ಯಮಂತ್ರಿ ಗಳನ್ನು ಭೇಟಿಯಾಗಿದ್ದೇನೆ ಹೊರತು ಬೇರೆ ಅರ್ಥ ಕಲ್ಪಿಸಬೇಡಿ ಎಂದರು.

300x250 AD
Share This
300x250 AD
300x250 AD
300x250 AD
Back to top