Slide
Slide
Slide
previous arrow
next arrow

ಗೃಹಲಕ್ಷ್ಮೀ ಯೋಜನೆ: ಬನವಾಸಿ ಬ್ಲಾಕ್ ಕಾಂಗ್ರೆಸ್’ನಿಂದ ಸಂಭ್ರಮಾಚರಣೆ

300x250 AD

ಶಿರಸಿ: ಕರ್ನಾಟಕ ಸರ್ಕಾರ ಚಾಲನೆ ನೀಡಲಿರುವ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ, ತಾಲೂಕಿನ ಬನವಾಸಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸರ್ಕಾರವನ್ನು ಅಭಿನಂದಿಸುವ ಸಲುವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಎಫ್.ನಾಯ್ಕ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸಿ, ಸಿಹಿ ವಿತರಣೆ ಮಾಡಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಬಸವರಾಜ ದೊಡ್ಮನಿ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷೆ ಹಾಗೂ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಶ್ರೀಲತಾ ಕಾಳೇರಮನಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾದ ಕಿರಣ್ ನಾಯ್ಕ,ಯುವ ಕಾಂಗ್ರೆಸ್ ಅಧ್ಯಕ್ಷ ಆಶೀಫ್ ಚೌದರಿ,ಹಿರಿಯರಾದ ಪುಟ್ಟಪ್ಪ ನಾಯ್ಕ, ಗಣಪತಿ ನಾಯ್ಕ, ಕಲಕರಡಿ, ಮಾಜಿ ಎಪಿಎಂಸಿ ಸದಸ್ಯರಾದ ಎಂ ಸಿ.ನಾಯ್ಕ, ಪ್ರಮುಖರಾದ ಸತೀಶ್ ನಾಯ್ಕ್ ಭಾಶಿ, ಅಸ್ಲಾಂ ಖಾನ್ ಬನವಾಸಿ, ಬಸವರಾಜ ಚನ್ನಯ್ಯ ಭಾಶಿ, ಬಸವರಾಜ ಅಜ್ಜರಣಿ, ಹೇಮಂತ ಅಜ್ಜರಣಿ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸಾಮಾಜಿಕ ಜಾಲ ತಾಣದ ಅಧ್ಯಕ್ಷರಾದ ಗಣಪತಿ ಚನ್ನಯ್ಯ ಹಾಗೂ ಗುಡ್ನಾಪುರ ಘಟಕಾಧ್ಯಕ್ಷರಾದ ಆನಂದ ನಾಯ್ಕ,ಬನವಾಸಿ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲ ತಾಣ ಅಧ್ಯಕ್ಷ ರಾಘವೇಂದ್ರ ನಾಯ್ಕ ಹಕ್ಕಿ ಮುಂತಾದವರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top