Slide
Slide
Slide
previous arrow
next arrow

ಸೆ.6ಕ್ಕೆ ಸಿದ್ಧಾಪುರದಲ್ಲಿ ಅರಣ್ಯವಾಸಿಗಳ ಸಭೆ

300x250 AD

ಸಿದ್ಧಾಪುರ: ತಾಲೂಕಾ ಅರಣ್ಯವಾಸಿಗಳ ಸಭೆಯನ್ನು ಸೆ.6, ಬುಧವಾರ ಮಧ್ಯಾಹ್ನ 3 ಗಂಟೆಗೆ ಸಿದ್ಧಾಪುರ ಪ್ರವಾಸಿ ಮಂದಿರದಲ್ಲಿ ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವಿಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರಣ್ಯವಾಸಿಗಳಿಗೆ ಗುರುತಿನ ಪತ್ರ(ಐಡಿ ಕಾರ್ಡ)ವಿತರಿಸುವುದು, ಬೆಂಗಳೂರಿನಲ್ಲಿ ಸೆ.14 ರಂದು ನಡೆಯುವ ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನದಲ್ಲಿನ ಪೋಟೋ ಪ್ರದರ್ಶನದ ಕುರಿತು ಚರ್ಚಿಸುವುದು, ಅರಣ್ಯ ಹಕ್ಕು ಮಂಜೂರಿ ಕುರಿತು ರಾಜ್ಯ ಸರಕಾರದ ಸಂಬಂಧಿಸಿದ ಹಿರಿಯ ಸಚಿವರೊಂದಿಗೆ ಸಂವಾದ ಏರ್ಪಡಿಸುವ ಕುರಿತು, ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಉಸ್ತುವಾರಿ ಸಚಿವ ಮಂಕಾಳ ವೈದ್ಯರೊಂದಿಗೆ ಚರ್ಚಿಸುವ ಸಭೆಯಲ್ಲಿ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top