Slide
Slide
Slide
previous arrow
next arrow

ಲೋಕಸಭೆ ಚುನಾವಣೆ; ಬಿಜೆಪಿಯಿಂದ ವಿವಿಧ ಕಾರ್ಯಕ್ರಮ

300x250 AD

ಹಳಿಯಾಳ: ಪಟ್ಟಣದ ಗಣೇಶ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಸಂಘಟನಾತ್ಮಕ ಚರ್ಚೆ, ಹೊಸ ವಿಸ್ತಾರಕರ ಪರಿಚಯ ಹಾಗೂ ಲೋಕಸಭೆ ಚುನಾವಣೆ ತಯಾರಿಗಾಗಿ ಮೊದಲಾದ ಕಾರ್ಯಕ್ರಮ ನಡೆಯಿತು.

ಸಭೆಯಲ್ಲಿ ಪಕ್ಷ ಸಂಘಟನೆ, ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಹಾಗೂ ರಾಜ್ಯ ಬಿಜೆಪಿ ಘಟಕದ ಆದೇಶದ ಮೇರೆಗೆ ಬರುವ ಮುಂದಿನ ದಿನಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಕ್ಷೇತ್ರದಾದ್ಯಂತ ಆಯೋಜನೆ ಮಾಡುವುದರ ಕುರಿತಾಗಿ ಹಾಗೂ ವಿಶೇಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆ ಹಾಗೂ ಜನಪರ ಯೋಜನೆಗಳನ್ನು ಮನೆ ಮನೆಗಳಿಗೆ ತೆರಳಿ ಪ್ರತಿ ಸಾರ್ವಜನಿಕರಿಗೆ ತಲುಪಿಸುವ ಬಗ್ಗೆ ಚರ್ಚಿಸಲಾಯಿತು.

300x250 AD

ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಎಸಳೆ, ಲೋಕಸಭಾ ಕ್ಷೇತ್ರದ ನೂತನ ಜಿಲ್ಲಾ ವಿಸ್ತಾರಕ ಪುರಂದರ್ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ, ಪಕ್ಷದ ಮಂಡಲ ಅಧ್ಯಕ್ಷ ಗಣಪತಿ ಕರಂಜೇಕರ, ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಮುತ್ನಾಳೆ, ವಿ.ಎಂ.ಪಾಟೀಲ್, ಪ್ರಮುಖರಾದ ಮಂಗೇಶ ದೇಶಪಾಂಡೆ, ಶಿವಾಜಿ ನರಸಾನಿ, ಶಿವಾಜಿ ಪಾಟೀಲ್, ಮೋಹನ ಗೌಡಾ, ಹನುಮಂತ ಚಿನಗಿನಕೊಪ್ಪ, ನಾರಾಯಣ ನಾಯ್ಕ, ಸಂಗೀತಾ ಜಾವಳೇಕರ, ಸಂತೋಷ ಘಟಕಾಂಬಳೆ, ಚಂದ್ರಕಾoತ ಕಮ್ಮಾರ, ವಾಸುದೇವ ಪೂಜಾರಿ ಆಕಾಶ ಉಪ್ಪಿನ, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಮೋರ್ಚಾ ಮತ್ತು ಬೂತ್ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು, ಮೊದಲಾದವರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top