Slide
Slide
Slide
previous arrow
next arrow

ವಾನಳ್ಳಿ ಪ್ರೌಢಶಾಲೆಯಲ್ಲಿ ‘ಸಂಸ್ಕೃತ ದಿನಾಚರಣೆ’

300x250 AD

ಶಿರಸಿ: ತಾಲೂಕಿನ ವಾನಳ್ಳಿಯ ಶ್ರೀ ಗಜಾನನ ಮಾಧ್ಯಮಿಕ ಶಾಲೆಯಲ್ಲಿ ಇತ್ತೀಚೆಗೆ ರಾಷ್ಟ್ರೀಯ ಸಂಸ್ಕೃತ ಸಪ್ತಾಹದ ಅಂಗವಾಗಿ ಸಂಸ್ಕೃತ ದಿನ ಮತ್ತು ರಕ್ಷಾ ಬಂಧನ ಕಾರ್ಯಕ್ರಮ ಆಚರಿಸಲಾಯಿತು.

ಶ್ಲೋಕ ಪಠಣ, ಹಾಡು, ಸಂಭಾಷಣೆ , ನೃತ್ಯ , ಕಥೆ ಹೇಳುವುದು, ಇತರೆ ಎಲ್ಲ ಪಠ್ಯ ಪೂರಕವಾದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದರು. ಎಲ್ಲಾ ಕಾರ್ಯಕ್ರಮಗಳು ಸಂಸ್ಕೃತ ಭಾಷೆಯಲ್ಲಿಯೇ ಆಯೋಜಿಸಿದ್ದು ವಿಶೇಷವಾಗಿತ್ತು. ಎಸ್.ಡಿ.ಎಂ.ಸಿ ಆಧ್ಯಕ್ಷರಾದ ಎಂ.ಎನ್.ಭಟ್ಟ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೌಢಶಾಲೆಯ ಪೂರ್ವ ವಿದ್ಯಾರ್ಥಿಗಳಾದ ಗೌತಮ್ ಭಟ್ಟ ಮತ್ತು ಶಶಾಂಕ ಹೆಗಡೆ ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಮುಖ್ಯಾಧ್ಯಾಪಕರ ಮಾರ್ಗದರ್ಶನದಲ್ಲಿ ಸಹ ಶಿಕ್ಷಕ ಕೃಷ್ಣಮೂರ್ತಿ ಭಟ್ಟ ಕಾರ್ಯಕ್ರಮ ಸಂಯೋಜಿಸಿದರೆ, ಉಳಿದ ಶಿಕ್ಷಕರು ಸಹಕರಿಸಿದರು.

300x250 AD

Share This
300x250 AD
300x250 AD
300x250 AD
Back to top