Slide
Slide
Slide
previous arrow
next arrow

ಅರಣ್ಯ ಭೂಮಿ ಹೋರಾಟಕ್ಕೆ ಜಾತಿ, ಧರ್ಮ, ಪಕ್ಷ ಬೇಧವಿಲ್ಲ: ರವೀಂದ್ರ ನಾಯ್ಕ

300x250 AD

ಯಲ್ಲಾಪುರ: ಅರಣ್ಯ ಭೂಮಿ ಹೋರಾಟಕ್ಕೆ ಜಾತಿ, ಧರ್ಮ, ಪಕ್ಷವಿಲ್ಲ. ಅರಣ್ಯವಾಸಿಗಳ ಹಿತ ಕಾಪಾಡುವುದು ಹೋರಾಟಗಾರರ ವೇದಿಕೆ ಮೂಲ ಉದ್ದೇಶ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

 ಅವರು ಗುರುವಾರ ಯಲ್ಲಾಪುರ ವೆಂಕಟ್ರಮಣ ದೇವಸ್ಥಾನದ ಆವರಣದಲ್ಲಿ ಜರುಗಿದ ಅರಣ್ಯವಾಸಿಗಳ ಬೃಹತ್ ಸಭೆಯಲ್ಲಿ ಅರಣ್ಯವಾಸಿಗಳಿಗೆ ಗುರುತಿನ ಪತ್ರ ವಿತರಣೆ ಮಾಡುತ್ತಾ ಮೇಲಿನಂತೆ ಮಾತನಾಡಿದರು.

 ಸೆ.14 ರಂದು ಬೆಂಗಳೂರಿನಲ್ಲಿ ನಡೆಯುವ ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನದ ಛಾಯಾಚಿತ್ರ ಪ್ರದರ್ಶನ ಮತ್ತು ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಸಮಾಲೋಚನಾ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಅರಣ್ಯ ಅತಿಕ್ರಮಣದಾರರು ಆಗಮಿಸಬೇಕೆಂದು ಅವರು ಕರೆ ನೀಡಿದರು.

300x250 AD

 ಸಭೆಯಲ್ಲಿ ತಾಲೂಕ ಅಧ್ಯಕ್ಷ ಭೀಮ್ಸಿ ವಾಲ್ಮೀಕಿ ಅಧ್ಯಕ್ಷತೆಯನ್ನ ವಹಿಸಿದ್ದರು.  ಸೀತಾರಾಮ ನಾಯ್ಕ ಕುಂದರಗಿ, ಮಹೇಶ್ ಮರಾಠಿ ಆನಗೋಡ, ಅನಂತ ಗೌಡ ಮಾವಿನಮನೆ, ಚನ್ನಪ್ಪ ಗೌಡ, ಗೋಪಾಲಕೃಷ್ಣ ಹೆಗಡೆ ನಂದೊಳ್ಳಿ, ರಾಜಾ ಸಾಬ ಮದನೂರು ಮುಂತಾದವರು ಮಾತನಾಡಿದರು, ವೇದಿಕೆಯ ಮೇಲೆ ಕೇಶವ ಕುಣಬಿ, ಈರಪ್ಪ ಮೊಪಣ್ಣನವರ, ಶ್ರೀಧರ ನಾಯ್ಕ ಚಳಗೇರಿ, ಸುಬ್ಬು ಬೈಲಪಡೆ, ಶೇಖರ್ ನಾಯ್ಕ ಹಿತ್ಲಳ್ಳಿ ಮುಂತಾದವರು ಉಪಸ್ಥಿತರಿದ್ದರು. ಭಾಸ್ಕರ ಗೌಡ ಹಿತ್ಲಳ್ಳಿ ಸ್ವಾಗತಿಸಿದರು, ಗಣಪತಿ ಗೌಡ ಅವರು ವಂದಿಸಿದರು.

ಜಿಲ್ಲೆಯಲ್ಲಿ 69733 ಅರ್ಜಿ ತಿರಸ್ಕಾರ:
 ಜಿಲ್ಲೆಯಲ್ಲಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ 85757 ಅರ್ಜಿಗಳು ಅರಣ್ಯವಾಸಿಗಳು ಸಲ್ಲಿಸಿದ್ದು, ಅವುಗಳಲ್ಲಿ 69733 ಅರ್ಜಿಗಳು ತಿರಸ್ಕಾರವಾಗಿದ್ದು ಕೇವಲ 2855 ಅರ್ಜಿಗಳಿಗೆ ಮಾತ್ರ ಕಾನೂನು ಮಾನ್ಯತೆ ಹಕ್ಕು ದೊರಕಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

Share This
300x250 AD
300x250 AD
300x250 AD
Back to top