Slide
Slide
Slide
previous arrow
next arrow

ಟಿ.ಎಸ್.ಎಸ್. ವೈದ್ಯಕೀಯ ಸಂಸ್ಥೆಯಿಂದ ಟಿ.ಎಸ್.ಎಸ್. ನೂತನ ನಿರ್ದೇಶಕರಿಗೆ ಅಭಿನಂದನೆ

300x250 AD

ಶಿರಸಿ: ದಿ ತೋಟಗಾರ್ಸ ಕೋ-ಆಪರೇಟಿವ್ ಸೇಲ್ ಸೊಸೈಟಿಯ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾದ ಗೋಪಾಲಕೃಷ್ಣ ವೆಂ. ವೈದ್ಯ ಹಾಗೂ ಆಡಳಿತ ಮಂಡಳಿ ನಿರ್ದೇಶಕರುಗಳನ್ನು ಸೆ.8, ಶುಕ್ರವಾರದಂದು ಟಿ.ಎಸ್.ಎಸ್. ಶ್ರೀಪಾದ ಹೆಗಡೆ ಕಡವೆ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪರವಾಗಿ ಗೌರವಿಸಲಾಯಿತು.ಈ ವೇಳೆ ಟಿ.ಎಸ್.ಎಸ್. ಶ್ರೀಪಾದ ಹೆಗಡೆ ಕಡವೆ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆಯುವ ಕಾರ್ಯವೈಖರಿಗಳ ಬಗ್ಗೆ ಮಾಹಿತಿಗಳನ್ನು ಪಡೆದರು.

ಈ ಸಂದರ್ಭದಲ್ಲಿ ಟಿ.ಎಸ್.ಎಸ್. ನೂತನ ಆಡಳಿತ ಮಂಡಳಿ ನಿರ್ದೇಶಕರುಗಳು ಹಾಗೂ ಟಿ.ಎಸ್.ಎಸ್. ಶ್ರೀಪಾದ ಹೆಗಡೆ ಕಡವೆ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಟ್ರಸ್ಟಿಗಳಾದ ಎಂ.ಪಿ.ಹೆಗಡೆ ಬಪ್ನಳ್ಳಿ, ಎಂ.ವಿ.ಜೋಶಿ ಕಾಗೇರಿ, ಜಿ.ಆರ್. ಹೆಗಡೆ ಸೋಂದಾ ಹಾಗೂ ಮತ್ತಿತರ ಗಣ್ಯವ್ಯಕ್ತಿಗಳು ಹಾಜರಿದ್ದರು.

300x250 AD
Share This
300x250 AD
300x250 AD
300x250 AD
Back to top