• Slide
    Slide
    Slide
    previous arrow
    next arrow
  • ಸೆ.15ಕ್ಕೆ ಶಿರಸಿಯಲ್ಲಿ ‘ಇಂಜಿನಿಯರ್ಸ್ ಡೇ’ ಕಾರ್ಯಕ್ರಮ

    300x250 AD

    ಶಿರಸಿ: ಶಿರಸಿ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ಸ್ ಅಸೋಸಿಯೇಷನ್, (ರಿ) ಶಿರಸಿ ವತಿಯಿಂದ ಸೆ.15, ಶುಕ್ರವಾರ ಲಯನ್ಸ್ ಸ್ಕೂಲಿನಲ್ಲಿ ಲಯನ್ಸ್ ಸಭಾಭವನದಲ್ಲಿ ಶ್ರೀ ವಿಶ್ವೇಶ್ವರಯ್ಯನವರ 163 ಜನ್ಮದಿನಾರಣೆ ಅಂಗವಾಗಿ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

    ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಶಾಸಕ ಭೀಮಣ್ಣ ಟಿ. ನಾಯ್ಕ ಹಾಗೂ ಮುಖ್ಯ ಅತಿಥಿಗಳಾಗಿ ವಿ.ಟಿ.ಯು. ಬೆಳಗಾವಿ ಮಾಜಿ ರಿಜಿಸ್ಟ್ರಾರ್ ಡಾ|| ಸತೀಶ ಅಣ್ಣಿಗೇರಿ ಇವರುಗಳು ಆಗಮಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಇಂ. ಶ್ಯಾಮಸುಂದರ ಎಂ. ಭಟ್, ವಹಿಸಲಿದ್ದಾರೆ. ಇದೆ ಸಂದರ್ಭದಲ್ಲಿ ಹಿರಿಯ ಇಂಜಿನೀಯರ್ ಅನಿಲ್ ಕರಿಯವರಿಗೆ ಹಾಗೂ ಫೌಂಡರ್ ಮೆಂಬರರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಅಲ್ಲದೇ ತಾಲೂಕಾ ಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ಹಲವಾರು ನೂತನ ಸದಸ್ಯರುಗಳು ಸಂಘಕ್ಕೆ ಸೇರ್ಪಡೆಗೊಳ್ಳಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಸಂಘಟಕರು ಕೋರಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top