Slide
Slide
Slide
previous arrow
next arrow

ಮಾವಿನಗುಂಡಿ ಮಹಿಳಾ ಸತ್ಯಾಗ್ರಹ ಸ್ಮಾರಕ ಪುನರ್ ನಿರ್ಮಾಣಕ್ಕೆ ಪ್ರಸ್ತಾವನೆ

300x250 AD

ಸಿದ್ದಾಪುರ: ತಾಲೂಕಿನ ಮಾವಿನಗುಂಡಿಯಲ್ಲಿ ನಿರ್ಮಿಸಲಾಗಿದ್ದ ಮಹಿಳಾ ಸತ್ಯಾಗ್ರಹ ಸ್ಮಾರಕ ಪುನರ್ ನಿರ್ಮಾಣ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಲಿಖಿತ ಹೇಳಿಕೆ ನೀಡಿದ್ದಾರೆ.

ಶಿರಸಿಯ ಡಾ.ರವಿಕಿರಣ ಪಟವರ್ಧನ ಅವರು ಈ ಕುರಿತು ಜಿಲ್ಲಾಧಿಕಾರಿಗಳಿಗೆ ವಾಟ್ಸಪ್ ಮುಖಾಂತರ ದೂರು ಸಲ್ಲಿಸಿ ಸಿದ್ದಾಪುರದಿಂದ ಹೊನ್ನಾವರ ಹಾಗೂ ಜೋಗ ಸಂಪರ್ಕ ರಸ್ತೆಯ ಮಾವಿನಗುಂಡಿ ರಸ್ತೆಗೆ ಹೊಂದಿಕೊಂಡಂತೆ ಮಹಿಳಾ ಸತ್ಯಾಗ್ರಹ ಸ್ಮಾರಕವಿದ್ದು, ಇದೀಗ ಸ್ಮಾರಕವು ತನ್ನ ಮೂಲ ಸ್ವರೂಪ ಕಳೆದುಕೊಂಡು ಕಳಾಹೀನವಾಗಿದ್ದು ಅದರ ಮರು ನಿರ್ಮಾಣ ಮಾಡಬೇಕು. ಆ ಮೂಲಕ ಸದರಿ ಸ್ಮಾರಕಕ್ಕೆ ಜಗತ್ಪ್ರಸಿದ್ಧ ಜೋಗ ಜಲಪಾತಕ್ಕೆ ಬರುವ ಪ್ರವಾಸಿಗರು ಭೇಟಿ ನೀಡುವಂತಾಗಬೇಕು ಎಂದು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

300x250 AD

ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಡಾ.ರವಿಕಿರಣ ಪಟವರ್ಧನ ಅವರಿಗೆ ಉತ್ತರ ನೀಡಿದ್ದು ಸ್ಮಾರಕ ಪುನರ್ ನಿರ್ಮಾಣ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳಿಗೂ ಮಾಹಿತಿ ಕಳಿಸಲಾಗಿದೆ ಎಂದು ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top