ಹೊನ್ನಾವರ: ಇಲ್ಲಿನ ಗೇರುಸೊಪ್ಪಾ ಬಳಿಯ ಬಂಗಾರ ಕುಸುಮಾ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಮದ ಪಾರ್ ಆಗಿದ್ದಾರೆ.
ಆಂಧ್ರಪ್ರದೇಶದ ಸುಬ್ರಹ್ಮಣ್ಯ ಕೃಷ್ಣಯ್ಯ ಕೋವುರ ತನ್ನ ಕುಟುಂಬ ಸದಸ್ಯರೊಟ್ಟಿಗೆ ಪ್ರಯಾಣಿಸುತ್ತಿದ್ದ. ಚಾಲಕ ಸಾಗರ ಕಡೆಯಿಂದ ಹೊನ್ನಾವರ ಕಡೆಗೆ ಅತಿ ವೇಗವಾಗಿ ಅಜಾಗರೂಕತೆಯಿಂದ ಚಾಯಿಸುತ್ತಿರುವಾಗ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರ್ ಆಗಿದ್ದು, ಈ ಘಟನೆ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.