Slide
Slide
Slide
previous arrow
next arrow

ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಅಧ್ಯಯನ ಮಂಡಳಿಗೆ ಹರಿಪ್ರಕಾಶ ಕೋಣೆಮನೆ ನಾಮ ನಿರ್ದೇಶನ

300x250 AD

ಶಿರಸಿ: ಬಳ್ಳಾರಿಯಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಅಧ್ಯಯನ ಮಂಡಳಿಯನ್ನು ರಚಿಸಿ, ಆದೇಶ ಹೊರಡಿಸಲಾಗಿದೆ.

ವಿಸ್ತಾರ ನ್ಯೂಸ್‌ನ ಸಿಇಒ ಮತ್ತು ಪ್ರಧಾನ ಸಂಪಾದಕರಾದ ಹರಿಪ್ರಕಾಶ ಕೋಣೆಮನೆ ಸೇರಿದಂತೆ ಐವರನ್ನು ಈ ಅಧ್ಯಯನ ಮಂಡಳಿಗೆ ನಾಮ ನಿರ್ದೇಶನ ಮಾಡಲಾಗಿದೆ.

ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಸಂಯುಕ್ತ ಅಧ್ಯಯನ ಮಂಡಳಿಯನ್ನು ಕುಲಪತಿಗಳ ಸೂಚನೆಯಂತೆ ರಚಿಸಲಾಗಿದೆ.

300x250 AD

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯಿದೆ-2000 ರ ನಿಯಮ 33ರ ಅನ್ವಯ ಹಾಗೂ ವಿಶ್ವವಿದ್ಯಾಲಯದ ಅಧ್ಯಯನ ಮಂಡಳಿಯ ಪರಿ ನಿಯಮಾವಳಿ(3) ಮತ್ತು (5@)ರ ಪ್ರಕಾರ ಇದರ ರಚನೆಯಾಗಿದೆ.

Share This
300x250 AD
300x250 AD
300x250 AD
Back to top