• Slide
    Slide
    Slide
    previous arrow
    next arrow
  • ಬಿರುಕು ಬಿಟ್ಟ ಕಾಂಕ್ರೀಟ್ ರಸ್ತೆ: ಕಳಪೆ ಕಾಮಗಾರಿ ವಿರುದ್ಧ ಆಕ್ರೋಶ

    300x250 AD

    ಗೋಕರ್ಣ: ಇಲ್ಲಿಯ ಸಮೀಪದ ರಾಜ್ಯ ಹೆದ್ದಾರಿ ಭದ್ರಕಾಳಿ ಕಾಲೇಜಿನ ಎದುರಿನಿಂದ ಮುಖ್ಯ ಸಂಪರ್ಕ ರಸ್ತೆಯು ನೂತನವಾಗಿ ನಿರ್ಮಾಣಗೊಂಡಿದ್ದು, ಕೆಲವೇ ತಿಂಗಳಲ್ಲಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದು ಹೇಗೆ ಮುಂದುವರೆದರೆ ಹಂತ ಹಂತವಾಗಿ ಸಂಪೂರ್ಣ ಕುಸಿಯುವ ಸಾಧ್ಯತೆ ಇದೆ.

    ಇಲ್ಲಿ ವಾಹನಗಳು ಹೆಚ್ಚಾಗಿ ಓಡಾಡುವುದರಿಂದ ಅಪಾಯ ಕಟ್ಟಡ ಬುತ್ತಿ ಎನ್ನುವಂತಾಗಿದೆ. ಒಂದು ಕೋಟಿ ರೂ. ವೆಚ್ಚದಲ್ಲಿ ಈ ರಸ್ತೆಯನ್ನು ನಿರ್ಮಿಸಲಾಗಿತ್ತು. ಆದರೆ ಕೆಲವೇ ತಿಂಗಳಲ್ಲಿ ಕಳಪೆತನ ಪ್ರದರ್ಶಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಂಬಂಧಪಟ್ಟ ಇಲಾಖೆಯವರು ತಕ್ಷಣ ಕಾರ್ಯ ಪ್ರವೃತ್ತರಾಗಿ ಇಲ್ಲಿಯ ರಸ್ತೆಯನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಕ್ಕೆ ಇಲಾಖೆ ಜವಾಬ್ದಾರಿಯಾಗಲಿದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top