ಬೆಂಗಳೂರು: ಮದುವೆ, ಮತ್ತಿತರೆ ಸಮಾರಂಭಗಳಲ್ಲಿ 400 ಜನಕ್ಕೆ ಅವಕಾಶ ನೀಡಲಾಗಿದೆ ಎಂದು ಆರ್. ಅಶೋಕ್ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹಕಚೇರಿ ಕೃಷ್ಣಾದಲ್ಲಿ ಸೋಮವಾರ ತಜ್ಞರ ಜೊತೆ ಸಭೆ ನಡೆಸಿದ ನಂತರ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿ, ಮದುವೆ ಸಮಾರಂಭಕ್ಕೆ ಕಲ್ಯಾಣ ಮಂಟಪಗಳಲ್ಲಿ ಗರಿಷ್ಠ 400 ಜನರಿಗೆ ಅವಕಾಶ ನೀಡಲಾಗಿದೆ.
ಕೊವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗಣೇಶೋತ್ಸವಕ್ಕೆ ಯಾವ ರೀತಿ ಅನುಮತಿ ನೀಡಬೇಕೆಂದು ಸೆಪ್ಟೆಂಬರ್ 5ರಂದು ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದಾರೆ ಎಂದು ಸಚಿವರು ಹೇಳಿದರು.