Slide
Slide
Slide
previous arrow
next arrow

ಮಥುರಾದಲ್ಲಿ ಮದ್ಯ-ಮಾಂಸ ಮಾರಾಟಕ್ಕೆ ನಿಷೇಧ; ಸಿಎಂ ಯೋಗಿ ಆದಿತ್ಯನಾಥ್

300x250 AD

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಥುರಾದಲ್ಲಿ ಮದ್ಯ ಮತ್ತು ಮಾಂಸಾಹಾರ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ತಿಳಿಸಿದ್ದಾರೆ.

ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ನಿಷೇಧಕ್ಕೆ ಪೂರಕವಾಗುವ ಯೋಜನೆಗಳನ್ನು ರೂಪಿಸುವುದು, ಇತರ ಕೆಲ ವ್ಯಾಪಾರಗಳಲ್ಲಿ ಅಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರನ್ನು ತೊಡಗಿಕೊಳ್ಳಲು ಮಾಡುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

300x250 AD

ಮಥುರಾದಲ್ಲಿ ಮದ್ಯ, ಮಾಂಸ ಮಾರಾಟದಲ್ಲಿ ತೊಡಗಿಸಿಕೊಂಡವರು ಆ ಕೆಲಸವನ್ನು ಕೈಬಿಟ್ಟು ಹಾಲಿನ ಮಾರಾಟವನ್ನು ಕೈಗೊಳ್ಳಬಹುದು. ಇದರಿಂದ ಮಥುರೆಯ ಗತ ವೈಭವದ ಪುನರುಜ್ಜೀವನ ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಬ್ರಿಜ್ ಭೂಮಿಯ ಅಭಿವೃದ್ಧಿಗೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಇದಕ್ಕಾಗಿ ಹಣದ ಕೊರತೆ ಇಲ್ಲ. ಆಧುನಿಕ ತಂತ್ರಜ್ಞಾನ ಮತ್ತು ಈ ಪ್ರದೇಶದ ಅಭಿವೃದ್ಧಿಗೆ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯ ಮಿಶ್ರಣವನ್ನು ನಾವು ನೋಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top