• Slide
    Slide
    Slide
    previous arrow
    next arrow
  • ‘ಕಾರ್ಮಿಕ ಅದಾಲತ್’ ಅಭಿಯಾನಕ್ಕೆ ಸಚಿವ ಹೆಬ್ಬಾರ್ ಚಾಲನೆ

    300x250 AD

    ಯಲ್ಲಾಪುರ: ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ರಾಜ್ಯಾದ್ಯಂತ ಕಾರ್ಮಿಕರ ಸಮಸ್ಯೆಯನ್ನು ಆಲಿಸಲು ಕಾರ್ಮಿಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಹೆಬ್ಬಾರ್ ‘ಕಾರ್ಮಿಕ ಅದಾಲತ್’ ಅಭಿಯಾನಕ್ಕೆ ಚಾಲನೆ ನೀಡಿದರು.


    ಅವರು ಪಟ್ಟಣದ ಅಡಿಕೆ ಭವನದಲ್ಲಿ ‘ಕಾರ್ಮಿಕ ಅದಾಲತ್’ ಅಭಿಯಾನಕ್ಕೆ ಚಾಲನೆ ನೀಡಿ, ನೋಂದಾಯಿತ ಕಾರ್ಮಿಕರು ಈ ಅಭಿಯಾನದ ಸದುಪಯೋಗವನುಪಡೆದುಕೊಳ್ಳುವಂತೆ ತಿಳಿಸಿದರು.

    300x250 AD

    ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಮಂಜೂರಾತಿ ಆದೇಶ ಪತ್ರವನ್ನು ನೀಡಿದರು, ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಈ ವೇಳೆ ಕೋವಿಡ್ ಲಸಿಕೆ ನೀಡಲಾಯಿತು.


    ಈ ಸಂದರ್ಭದಲ್ಲಿ ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ, ಬೆಳಗಾವಿ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಹ ಮುಲ್ಲಾ, ವಿಕಾಸ ಬ್ಯಾಂಕ್ ಅಧ್ಯಕ್ಷ ಮುರಳಿ ಹೆಗಡೆ, ಬಿಜೆಪಿ ಮಂಡಲ ಉಪಾಧ್ಯಕ್ಷ ಶಿರಿಷ್ ಪ್ರಭು ಹಾಗೂ ಪಟ್ಟಣ ಪಂಚಾಯತ ಅಧ್ಯಕ್ಷ ಸುನಂದಾ ದಾಸ್, ಉಪಾಧ್ಯಕ್ಷ ಶ್ಯಾಮಲಿ ಪಾಟಣಕರ್ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top