ಶಿರಸಿ: ಉತ್ತರ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಕುಮಟಾ ಇವರು ಶುಕ್ರವಾರ ನಡೆಸಿದ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಎಂಇಎಸ್ ಪದವಿಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಾಗಾಂಜಲಿ ಹೆಗಡೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಈ ವಿದ್ಯಾರ್ಥಿನಿಯ ಸಾಧನೆಗೆ ಆಡಳಿತ ಮಂಡಳಿಯವರು, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ನಾಗಾಂಜಲಿ ದ್ವಿತೀಯ
![](https://euttarakannada.in/wp-content/uploads/2023/09/manoj-scaled-e1695461451885-730x438.jpg?v=1695461404)