Slide
Slide
Slide
previous arrow
next arrow

ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ವೀಕ್ಷಕರಾಗಿ ಮಧು ಬಂಗಾರಪ್ಪ

300x250 AD

ಶಿರಸಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ವೀಕ್ಷಕರಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಆದೇಶ ಹೊರಡಿಸಿದ್ದಾರೆ.

ಸಚಿವ ಮಧು ಬಂಗಾರಪ್ಪ ಅವರು ಲೋಕಸಭಾ ಕ್ಷೇತ್ರದಲ್ಲಿ ವಿಧಾನಸಭೆ ಹಾಗೂ ಕ್ಷೇತ್ರವಾರು ಮುಖಂಡರನ್ನು, ಕಾರ್ಯಕರ್ತರನ್ನು ಭೇಟಿಯಾಗಿ, ಸಭೆ ನಡೆಸಿ, ಪಕ್ಷ ಸಂಘಟನೆ ನಡೆಸಬೇಕು. ಅಲ್ಲದೇ, ಪ್ರಮುಖರ ಅಭಿಪ್ರಾಯ ಪಡೆದು ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಯಾರು ಸಂಭಾವ್ಯ ಅಭ್ಯರ್ಥಿ ಆಗಬಹುದೆಂಬ ಮಾಹಿತಿಯನ್ನು ಕ್ರೋಡಿಕರಿಸಿ, 15 ದಿನದೊಳಗೆ ಗೌಪ್ಯ ವರದಿ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top