Slide
Slide
Slide
previous arrow
next arrow

ಧನಕ್ಕಿಂತ ಧರ್ಮಕ್ಕೆ ಮಹತ್ವ ಅಗತ್ಯ: ರಾಘವೇಶ್ವರ ಶ್ರೀ

300x250 AD

ಗೋಕರ್ಣ: ಸಮಾಜದಲ್ಲಿ ಧನಕ್ಕಿಂತ ಹೆಚ್ಚಿನ ಮಹತ್ವ ಧರ್ಮಕ್ಕೆ ಸಿಕ್ಕಿದಾಗ ಮಾತ್ರ ಅದು ಸಂಸ್ಕಾರಯುತ ಸಮಾಜವಾಗುತ್ತದೆ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಪರಮಪೂಜ್ಯರು ಬುಧವಾರ ರಾಮಚಂದ್ರಾಪುರ ಮಂಡಲದ ಭೀಮನಕೋಣೆ, ಪುರಪ್ಪೇಮನೆ ಮತ್ತು ಕಾನುಗೋಡು ವಲಯಗಳಿಂದ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದ ಶಿಷ್ಯಭಕ್ತರಿಂದ ಶ್ರೀಗುರುಭಿಕ್ಷಾಸೇವೆ ಸ್ವೀಕರಿಸಿ ಆಶೀರ್ವಚನ ನೀಡಿದರು.

300x250 AD

ಹವ್ಯಕ ಮಹಾಮಂಡಲ ಗೌರವ ಕಾರ್ಯದರ್ಶಿ ನಾಗರಾಜ ಭಟ್ ಪಿದಮಲೆ, ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಸೇವಾ ಪ್ರಧಾನ ಪ್ರಸನ್ನ ಉಡುಚೆ, ರಾಮಚಂದ್ರಾಪುರ ಮಂಡಲದ ಕಾರ್ಯದರ್ಶಿ ರಮೇಶ್ ಕಾನುಗೋಡು, ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಯು.ಎಸ್.ಗಣಪತಿ ಭಟ್, ಕಾರ್ಯಾಲಯ ಕಾರ್ಯದರ್ಶಿ ಜಿ.ವಿ.ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top