Slide
Slide
Slide
previous arrow
next arrow

ಹೊಸ ಪ್ರಶ್ನೆ ಪತ್ರಿಕೆ ಮಾದರಿಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸುವ ಕಾರ್ಯವಾಗಲಿ: ರಾಮಪ್ಪ ಸಿ.

300x250 AD

ಕುಮಟಾ: ಮಾನ್ಯ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಉತ್ತರ ಕನ್ನಡ ಮತ್ತು ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜು ಹಾಗೂ ಉತ್ತರ ಕನ್ನಡ ಪದವಿಪೂರ್ವ ಕಾಲೇಜುಗಳ ವಾಣಿಜ್ಯಶಾಸ್ತ್ರ ಉಪನ್ಯಾಸಕರ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜನೆಗೊಂಡ ವ್ಯವಹಾರ ಅಧ್ಯಯನ ಹಾಗೂ ಲೆಕ್ಕಶಾಸ್ತ್ರ ವಿಷಯದ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರವನ್ನು ಉತ್ತರ ಕನ್ನಡ ಜಿಲ್ಲೆಯ ಮಾನ್ಯ ಉಪನಿರ್ದೇಶಕರಾದ ರಾಮಪ್ಪ ಸಿ. ಇಲ್ಲಿನ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ಉದ್ಘಾಟಿಸಿ ಮಾತನಾಡಿದರು.

2023-24ನೇ ಸಾಲಿನಿಂದ ಪ್ರಯೋಗ ರಹಿತ ವಿಷಯಗಳ ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಬದಲಾವಣೆ ಮಾಡಲಾಗಿದೆ. ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯನ್ನು 80 ಅಂಕಗಳಿಗೆ ಉತ್ತರಿಸಬೇಕು ಹಾಗೂ ಉಳಿದ 20 ಅಂಕಗಳನ್ನು ಆಂತರಿಕ ಪರೀಕ್ಷೆ ಮತ್ತು ಪ್ರಾಜೆಕ್ಟ್ ಆಧಾರದ ಮೇಲೆ ನೀಡಬೇಕು. ಯಾವ ರೀತಿಯಾಗಿ ಪರೀಕ್ಷೆಗೆ ತಯಾರಿ ಮಾಡಬೇಕು ಎಂಬುದನ್ನು ವಿಷಯ ತಜ್ಞರ ಮೂಲಕ ಅರಿತುಕೊಂಡು ವಿದ್ಯಾರ್ಥಿಗಳಿಗೆ ತಲುಪಿಸುವಂತಾಗಲಿ ಎಂದು ಸೇರಿದ ಜಿಲ್ಲೆಯ ವಾಣಿಜ್ಯ ಶಾಸ್ತ್ರ ಉಪನ್ಯಾಸಕರುಗಳಿಗೆ ತಿಳಿಸಿದರು.

ಸರಸ್ವತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕಿರಣ ಭಟ್ಟ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ವಿಷಯ ಉಪನ್ಯಾಸಕರುಗಳು ಕಾರ್ಯಾಗಾರದ ಸರಿಯಾದ ಪ್ರಯೋಜನ ಪಡೆಯುವಂತಾಗಲಿ ಎಂದು ಹೇಳಿದರು. ಹಾಗೆಯೆ ಇದೆ ಸಮಯದಲ್ಲಿ ನೂತನವಾಗಿ ನಿಯೋಜನೆಗೊಂಡ ಪದವಿಪೂರ್ವ ಶಿಕ್ಷಣ ಇಲಾಖೆಯ ಉತ್ತರ ಕನ್ನಡ ಜಿಲ್ಲೆಯ ಮಾನ್ಯ ಉಪನಿರ್ದೇಶಕರಾದ ರಾಮಪ್ಪ ಸಿ. ಅವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಿದರು.

300x250 AD

ಈ ಸಂದರ್ಭದಲ್ಲಿ ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಸತೀಶ ನಾಯ್ಕ, ವಾಣಿಜ್ಯ ಶಾಸ್ತ್ರದ ಹಿರಿಯ ಉಪನ್ಯಾಸಕರಾದ ಆರ್. ಎಚ್. ನಾಯ್ಕ, ಸಂಪನ್ಮೂಲ ವ್ಯಕ್ತಿಗಳಾದ ಜಿ. ಎಸ್. ಭಟ್ಟ ಹಾಗೂ ಜಿಲ್ಲೆಯ ವಾಣಿಜ್ಯ ವಿಭಾಗದ ವಿಷಯ ಉಪನ್ಯಾಸಕರುಗಳು ಉಪಸ್ಥಿತರಿದ್ದರು.

ಉಪಪ್ರಾಂಶುಪಾಲರಾದ ಶ್ರೀಮತಿ ಸುಜಾತ ಹೆಗಡೆ ಸ್ವಾಗತಿಸಿದರು, ಉಪನ್ಯಾಸಕರಾದ ಶ್ರೀಮತಿ ರಮ್ಯಾ ಸಭಾಹಿತ ವಂದಿಸಿದರು. ವಿದ್ಯಾರ್ಥಿನಿ ಕು. ಅನನ್ಯ ಭಟ್ಟ ಭರತನಾಟ್ಯ ಮಾಡಿದಳು. ಉಪನ್ಯಾಸಕರಾದ ಶ್ರೀಮತಿ ಗಾಯತ್ರಿ ಕಾಮತ ಕಾರ್ಯಕ್ರಮ ನಿರೂಪಿಸಿದರು.

Share This
300x250 AD
300x250 AD
300x250 AD
Back to top