• Slide
    Slide
    Slide
    previous arrow
    next arrow
  • ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ವ್ಯಕ್ತಿ ಆತ್ಮಹತ್ಯೆ

    300x250 AD

    ಭಟ್ಕಳ: ಮಾನಸಿಕ ಒತ್ತಡಕ್ಕೆ ಸಿಲುಕಿದ ವ್ಯಕ್ತಿಯೋರ್ವನು ಮನೆಯ ಸೀಲಿಂಗ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಶಿರಾಲಿಯಲ್ಲಿ ನಡೆದಿದೆ.

    ಮೃತವ್ಯಕ್ತಿಯನ್ನು ಮಾದೇವ ಸಣ್ಣಮಂಜು ನಾಯ್ಕ್(58) ಎಂದು ಗುರುತಿಸಲಾಗಿದೆ. ಮನೆಯವರೆಲ್ಲರೂ ಸಂಬಂಧಿಕರ ಮನೆಗೆ ತೆರಳಿ ವಾಪಸ್ಸಾಗುವಷ್ಟರಲ್ಲಿ ಈ ಘಟನೆ ಸಂಭವಿಸಿದೆ.

    ಇವರು ಕಳೆದ 2ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಅದನ್ನೆ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.

    300x250 AD

    ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಎಸ್ಐ ಭರತ್ ತನಿಖೆ ಕೈಗೊಂಡಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top