Slide
Slide
Slide
previous arrow
next arrow

ನಿಲೇಕಣಿ ಕಾಲೇಜಿನ ಈರ್ವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ಹಳಿಯಾಳದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾ ಕೂಟದಲ್ಲಿ ಇಲ್ಲಿನ ಶ್ರೀ ವೆಂಕಟರಾವ ನಿಲೇಕಣಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ವಿಶ್ವನಾಥ ಗೌಡ 800 ಮೀ. ಮತ್ತು 400 ಮೀ. ಓಟದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆ ಆಗಿರುತ್ತಾನೆ.

ಪ್ರಥಮ ಪಿಯುಸಿ ವಿದ್ಯಾರ್ಥಿ ನಾಗರಾಜ ಮರಾಠಿ ಈತನು ಖೋ-ಖೋ ಕ್ರೀಡೆಯಲ್ಲಿ ಉತ್ತರ ಕನ್ನಡ ಜಿಲ್ಲಾ ತಂಡಕ್ಕೆ ಆಯ್ಕೆಯಾಗಿದ್ದು, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಪಡೆದಿರುತ್ತಾನೆ. ವಿದ್ಯಾರ್ಥಿಗಳ ಈ ಯಶಸ್ಸಿಗೆ ಪ್ರಾಂಶುಪಾಲ ನರೇಂದ್ರ ನಾಯಕ ಹಾಗೂ ಕಾಲೇಜು ಅಭಿವೃದ್ದಿ ಸಮಿತಿ ಹಾಗೂ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.

300x250 AD
Share This
300x250 AD
300x250 AD
300x250 AD
Back to top